1:16 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ವಿವೇಕ ಸಪ್ತಾಹ: ಮಂಗಳೂರಿನಲ್ಲಿ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ

15/01/2022, 01:16

ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ವಿವೇಕ ಸಪ್ತಾಹದ ಪ್ರಯುಕ್ತ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ ಶುಕ್ರವಾರ ಕೆನರಾ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.





ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಪೊಲೀಸ್ ಕಮಿಷನರ್
ಶಶಿಕುಮಾರ್ ನೆರವೇರಿಸಿ ದುಶ್ಚಟಗಳಿಗೆ ಬಲಿಯಾಗದಂತೆ ವಿದ್ಯಾರ್ಥಿ ಜೀವನವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಮನದಟ್ಟು ಮಾಡಿದರು.

ಮುಖ್ಯ ಅತಿಥಿಯಾಗಿ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಮಾತನಾಡಿ ಮಾದಕ ದ್ರವ್ಯದ ವ್ಯಾಸನಿಗಳಾಗಿ ಮುಂದಿನ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ವಿವೇಕಾನಂದರು ರಾಷ್ಟ್ರದ ಶಕ್ತಿಯೇ ಯುವಕರು ಎಂದು ಅವರು ಹೇಳಿದ್ದರು.. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಗೊಂಡು ಮಾದಕ ವಸ್ತುಗಳ ದಾಸರಾಗದೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಿ.ಎಂದು ಅವರು ಹೇಳಿದರು.

ಕೆನರಾ ಹೈಸ್ಕೂಲ್ ಅಸೋಶಿಯೇಷನ್ ಪರ್ಯಾಯ ಖಜಾಂಜಿ ಪುರುಷೋತ್ತಮ,ಕೆನರಾ ಕಾಲೇಜಿನ ರಾ. ಸೆ. ಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ.ಯು.ಎಸ್ ಉಪಸ್ಥಿತರಿದ್ದರು.


ಸಮಾಪನ್ಮೂಲ ವ್ಯಕ್ತಿ ಯಾಗಿ, ಫಾದರ್ ಮುಲ್ಲರ್ ಆಸ್ಪತ್ರೆಯ ಮಾನಸಿಕ ವಿಭಾಗದ ಡಾ.ಅವಿನಾಶ್ ಜಾಯಿ ಮಾದಕ ದ್ರವ್ಯದ ವ್ಯಸನದಿಂದ ಅರೋಗ್ಯದ ಮೇಲಾಗುವ ದುಷ್ಪಾರಿಣಾಮದ ಬಗ್ಗೆ
ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ.ವಿ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು