4:05 AM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ವಿವಿಧ ಬೇಡಿಕೆ ಆಗ್ರಹಿಸಿ ನಾಳೆ ಕುದ್ರೋಳಿಯಿಂದ ಬಿಲ್ಲವರ ಐತಿಹಾಸಿಕ ಪಾದಯಾತ್ರೆ ಆರಂಭ

05/01/2023, 14:02

ಮಂಗಳೂರು(reporterkarnataka.com): ಬಿಲ್ಲವ, ಈಡಿಗ, ನಾಮಧಾರಿ ಸಮುದಾಯದ ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರಕಾರವನ್ನು ಒತ್ತಾಯಿಸಿ ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ. ಪ್ರಣವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯಲಿರುವ 41 ದಿನಗಳ ಐತಿಹಾಸಿಕ ಪಾದಯಾತ್ರೆ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಜ.6ರಂದು ಆರಂಭವಾಗಲಿದೆ.

658 ಕಿಮೀ ಹಾದಿಯ ಪಾದಯಾತ್ರೆಗೆ ಬಿಲ್ಲವ ಸಮುದಾಯದ ಮಹಾನ್ ನಾಯಕ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ, ತೆಲಂಗಾಣ ಸರಕಾರದ ಅಬಕಾರಿ ಹಾಗೂ ಪ್ರವಾಸೋದ್ಯಮ ಸಚಿವ ಶ್ರೀನಿವಾಸ ಗೌಡ್ ಅವರು ಚಾಲನೆ ನೀಡಲಿರುವರು.

ಸಮಾರಂಭದಲ್ಲಿ ಆಂಧ್ರಪ್ರದೇಶ ಸರಕಾರದ ಕೃಷಿ ಸಚಿವ ಜೋಗಿ ರಮೇಶ್, ಆಂಧ್ರಪ್ರದೇಶ ರಾಜಮುಂಡ್ರಿ ಸಂಸದ ಮರ್ಗಣಿ ಭರತ್, ಬಹುಭಾಷಾ ಚಿತ್ರನಟ ಸುಮನ್ ತಲ್ವಾರ್. ಈಡಿಗ ಮುಖಂಡರು, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ಆರ್. ಶ್ರೀನಾಥ್, ಬಿಜೆಪಿ ಮುಖಂಡ, ಗುಲ್ಬರ್ಗ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್, ವಿಧಾನ ಪರಿಷತ್ ಪ್ರತಿಪಕ್ಷ ಮುಖಂಡ ಬಿ.ಕೆ.ಹರಿಪ್ರಸಾದ್, ಮಹಿಳಾ ನಾಯಕಿ, ಕಳಚೂರಿ ಸಮಾಜ ಒಕ್ಕೂಟದ ಅಧ್ಯಕ್ಷೆ ಅರ್ಚನಾ ಜೈಸ್ವಾಲ್, ಸಿಗಂಧೂರು ಶ್ರೀ ಚೌಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಶ್ರೀ ರಾಮಪ್ಪಜ್ಜ, ಸಮಾಜದ ಮುಖಂಡರು, ಕರ್ನಾಟಕ ರಾಜ್ಯ ಸಚವರಾದ ಕೋಟ ಶ್ರೀನಿವಾಸ ಪೂಜಾರಿ, ವಿ.ಸುನೀಲ್ ಕುಮಾರ್, ವಸಂತ ಬಂಗೇರ , ವಿನಯ ಕುಮಾರ್ ಸೊರಕೆ, ಗೋಪಾಲ ಪೂಜಾರಿ ಬೈಂದೂರು, ಕೆ. ಹರೀಶ್ ಕುಮಾರ್, ಉಮಾನಾಥ ಕೋಟ್ಯಾನ್, ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಡಿ.ಸುವರ್ಣ, ಮೂಡಾ ಅಧ್ಯಕ್ಷ ರವಿಶಂಕರ ಮಿಜಾರ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್. ಸಾಯಿರಾಮ್, ಯುವವಾಹಿನಿ ಅಧ್ಯಕ್ಷ ರಾಜೇಶ್ ಬಂಟ್ವಾಳ್, ಮೂರ್ತೆದಾರರ ಸೇವಾ ಸಂಘ ಅಧ್ಯಕ್ಷ ಸಂಜೀವ ಪೂಜಾರಿ ಮತ್ತಿತರರು ಮುಖ್ಯಅತಿಥಿಗಳಾಗಿರುವರು.

ಪಾದಯಾತ್ರೆ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ವಿಖ್ಯಾತನಂದ ಸ್ವಾಮೀಜಿ, ಸೊಲೂರು ಮಠ, ಬೆಂಗಳೂರು, ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಬಂಜಾರ ಗುರುಪೀಠ ಚಿತ್ರದುರ್ಗ, ಶ್ರೀಬಸವಮೂರ್ತಿ ಕುಂಬಾರ ಗುಂಡಯ್ಯ ಮಹಾಸ್ವಾಮೀಜಿ, ಚಿತ್ರದುರ್ಗ,ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರ, ಮಾಣಿಲ ವಿಟ್ಲ, ಶ್ರೀ ಮಹಾಬಲೇಶ್ವರ ಸ್ವಾಮೀಜಿ, ಶ್ರೀ ಕ್ಷೇತ್ರ ಕಣಿಯೂರು, ಶ್ರೀಕೃಷ್ಣ ಗುರೂಜಿ, ಕುಕ್ಕಾಜೆ ಶ್ರೀಕಾಳಿಕಾಂಬ ಆಂಜನೇಯ ಕ್ಷೇತ್ರ, ಮಾಣಿಲ, ಶ್ರೀಸಂಗಮನಾಂದ ಸ್ವಾಮೀಜಿ, ಪಿಂಜಾರ ಗುರುಪೀಠ, ಶ್ರೀನಿಶ್ಚಲ ನಿರಂಜನ ದೇಸಿಕೇಂದ್ರ ಮಹಾಸ್ವಮೀ, ಸರ್ವ ಧರ್ಮಗುರುಪೀಠ ದೊಡ್ಡಬಳ್ಳಾಪುರ ಭಾಗವಹಿಸುವರು.

ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕು ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪೂಜ್ಯರಾದ ಡಾ. ಪ್ರಣವಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಐತಿಹಾಸಿಕ ಪಾದಯಾತ್ರೆ ನಡೆಯಲಿದ್ದು, ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ರಚನೆ ಮಾಡಿ 5೦೦ ಕೋಟಿ ರೂ ಅನುದಾನ ಮಂಜೂರು ಮಾಡಬೇಕು, ಕುಲಕಸುಬು ಸೇಂದಿ ನಿಷೇಧ ರದ್ದುಪಡಿಸಬೇಕು ಅಥವ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು, ಈಡಿಗ ಸಮುದಾಯದ ಧರ್ಮದರ್ಶಿ ಶ್ರೀ ರಾಮಪ್ಪಜ್ಜ ಆಡಳಿತದ ಸಿಗಂದೂರು ಶ್ರೀ ಚೌಡೇಶ್ವರಿ ಕ್ಷೇತ್ರದಲ್ಲಿ ಸರಕಾರದ ಹಸ್ತಕ್ಷೇಪ ನಿಲ್ಲಿಸಬೇಕು, ಸಾರಾಯಿ ಹಾಗೂ ಸೇಂದಿ ನಿಷೇಧದಿಂದ ನಿರ್ಗತಿಕರಾದ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ಮೂರು ವರ್ಷಗಳಿಂದ ಸರಕಾರವನ್ನು ಒತ್ತಯಿಸಲಾಗುತ್ತಿದೆ.

ಇದರೊಂದಿಗೆ ಬಿಲ್ಲವ ಈಡಿಗರ ಜನಸಂಖ್ಯೆ ಹೆಚ್ಚಿರುವ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ,ರಾಯಚೂರು,ಬೀದರ್, ಗುಲ್ಬರ್ಗ ಜಿಲ್ಲೆಗಳಲ್ಲಿ ಹೆಚ್ಚಿನ ರಾಜಕೀಯ ಪ್ರಾತಿನಿತ್ಯ ನೀಡಬೇಕು ಎಂದು ಕೂಡ ಬೇಡಿಕೆ ಇರಿಸಲಾಗಿದೆ.
ಈಗಾಗಲೇ 2ಎಯಲ್ಲಿ ಮೀಸಲಾತಿ ಹೊಂದಿರುವ ಕುರುಬ, ಈಡಿಗ, ಕುಂಬಾರ ಸೇರಿದಂತೆ 102 ಕಾಯಕ ಸಮುದಾಯದ ಜನರಿಗೆ ಮೀಸಲಾತಿಯಲ್ಲಿ ಯಾವುದೇ ತೊಂದರೆ ಆಗಬಾರದು ಎಂದು ಸರಕಾರವನ್ನು ಎಚ್ಚರಿಸಲು ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಡಾ. ಪ್ರಣವಾನಂದ ಸ್ವಾಮೀಜಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಿಂದ ಉಡುಪಿ, ಶಿವಮೊಗ್ಗ, ದಾವಣಗೆರೆ,ಚಿತ್ರದುರ್ಗ,ತುಮಕೂರು ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲಪುವ ಪಾದಯಾತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಜನರು ಭಾಗವಹಿಸಲಿದ್ದಾರೆ.

ಜ.6ರಂದು ಶುಕ್ರವಾರ ಮಂಗಳೂರಿನ ಶ್ರೀ ಕುದ್ರೋಳಿ ಕ್ಷೇತ್ರದ ಆವರಣದಲ್ಲಿ ಬೆಳಿಗ್ಗೆ 10.30ಕ್ಕೆ ಐತಿಹಾಸಿಕ ಪಾದಯಾತ್ರೆಯ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಧ್ಯಾಹ್ನ ಕುದ್ರೋಳಿಯಿಂದ ಪಾದಯಾತ್ರೆ ಹೊರಡಲಿದೆ.ಮೊದಲ ದಿನ ಕುಳಾಯಿಯಲ್ಲಿ ವಾಸ್ತವ್ಯ ಹೂಡಲಿದ್ದು, ಮರುದಿನ ಬೆಳಗ್ಗೆ ಕುಳಾಯಿ ಪುನಾರಂಭವಾಗುವ ಪಾದಯಾತ್ರೆ ಅಂದು ಸಂಜೆ ಹೆಜಮಾಡಿ ತಲುಪಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು