2:46 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ವಿವಿಧ ಬೇಡಿಕೆ ಆಗ್ರಹಿಸಿ ಪೌರ ಕಾರ್ಮಿಕರ ಮುಷ್ಕರ: ತ್ಯಾಜ್ಯ ಸಾಗಾಟ ವಾಹನಗಳನ್ನು ನಿಲ್ಲಿಸಿ ಆಕ್ರೋಶ; ಮೇಯರ್ ಭೇಟಿ

09/01/2023, 18:11

ಮಂಗಳೂರು(reporterkarnataka.com): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಫಾಯಿ ಕರ್ಮಚಾರಿಗಳು ಸೋಮವಾರ ಕೆಲಸವನ್ನು ಸ್ಥಗಿತ ಮಾಡಿ ಮುಷ್ಕರ ನಡೆಸಿದ್ದು, ಕೂಳೂರು ಗೋಲ್ಡ್ ಪಿಂಚ್ ಮೈದಾನದ ಎದುರು ತ್ಯಾಜ್ಯ ಸಾಗಣೆಯ ವಾಹನಗಳನ್ನು ನಿಲ್ಲಿಸಿ ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದರು. ಈ ನಡುವೆ ಮೇಯರ್ ಜಯಾನಂದ ಆಂಚನ್ ಅವರು ಮುಷ್ಕರ ನಿರತರ ಭೇಟಿಯಾಗಿ ಮಾತುಕತೆ ನಡೆಸಿದರು.

ಸರಕಾರವು ನಿಗದಿಗೊಳಿಸಿದ ವೇತನವನ್ನು ಆ್ಯಂಟನಿ ವೇಸ್ಟ್ ಕಂಪನಿ ನೀಡದೆ ವಂಚಿಸುತ್ತಿದೆ. ಇದನ್ನು ಯಥಾವತ್ತಾಗಿ ನೀಡಬೇಕು. ಕಾರ್ಮಿಕರ ಗಳಿಕೆ ರಜೆ ಮತ್ತು ನಿಗದಿತ ರಜೆ, ಉಪಹಾರ ಬತ್ಯೆ ನೀಡಬೇಕು. ದುರಸ್ತಿ ಆಗದೇ ಇರುವ ವಾಹನಗಳನ್ನು ಬದಲಾಯಿಸಬೇಕು. ನಿಗದಿತ ಸಮಯಕ್ಕಿಂತ ಹೆಚ್ಚುವರಿ ದುಡಿಸಿಕೊಳ್ಳುವುದನ್ನು ಸ್ಥಗಿತ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಂಬಿ ನಾಗಣ್ಣಗೌಡ, ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಅಧ್ಯಕ್ಷ ಕೆ.ನಾರಾಯಣ ಶೆಟ್ಟಿ, ಕರ್ನಾಟಕ ಹೊರಗುತ್ತಿಗೆ ನೌಕರರ ಸಂಘದ ಮುಖಂಡ ಎಂ.ಚಂದ್ರು, ಹೊರಗುತ್ತಿಗೆ ನೌಕರರ ಸಂಘದ ಕರಾವಳಿ ವಿಭಾಗದ ಸಂಚಾಲಕ ಅಣ್ಣಪ್ಪಕೆರೆಕಾಡು ಅವರು ಮಾತನಾಡಿದರು.
ಮೇಯರ್ ಜಯಾನಂದ ಅಂಚನ್, ಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್, ಆರೋಗ್ಯ ಇಲಾಖೆಯ ಅಧಿಕಾರಿ ಮಂಜಯ್ಯ ಶೆಟ್ಟಿ, ವಲಯ ಆಯುಕ್ತ ಶಬರಿನಾಥ ರೈ ಅವರು ಧರಣಿನಿರತ ಸ್ಥಳಕ್ಕೆ ಭೇಟಿ ನೀಡಿ ಪೌರ ಕಾರ್ಮಿಕರ ಜೊತೆ ಮಾತುಕತೆ ನಡೆಸಿದರು.‌

ಮಂಗಳವಾರ ಸಂಜೆ 5ಕ್ಕೆ ನಗರಪಾಲಿಕೆಯ ಅಧಿಕಾರಿಗಳು ಹಾಗೂ ಆ್ಯಂಟನಿ ವೇಸ್ಟ್ ಕಂಪನಿ ಮುಖ್ಯಸ್ಥರು ಮತ್ತು ಸಂಘಟನೆಯ ಪ್ರಮುಖರ ಜತೆಗೆ ವಿಶೇಷ ಸಭೆ ನಡೆಸಿ ಕಾರ್ಮಿಕರ ಬೇಡಿಕೆ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.
ಮಂಗಳೂರು ಸಪಾಯಿ ಕರ್ಮಚಾರಿಗಳ ಸಂಘದ ಮುಖಂಡ ಅಶೋಕ್ ಕೊಂಚಾಡಿ, ದಿನೇಶ್ ಕುಲಾಲ್, ಚೆನ್ನಕೇಶವ, ಸುಧೀರ್, ಸಿದ್ದರೂಡ, ಪೂವಪ್ಪ ಅವರು ಧರಣಿ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು