4:39 AM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

‘ವಾಯ್ಸ್ ಆಫ್ ಆರಾಧನಾ’: ಮಾರ್ಚ್ ತಿಂಗಳ ಟಾಪರ್ ಆಗಿ ಮಂಗಳೂರಿನ ನತಾಶ ಹಾಗೂ ಕಾಸರಗೋಡಿನ ಅಸ್ತಾ ಆಯ್ಕೆ

07/04/2022, 19:07

ಮಂಗಳೂರು(reporterkarnataka.com):

ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮಂಗಳೂರಿನ ನತಾಶ ಹಾಗೂ ಕಾಸರಗೋಡಿನ ಅಸ್ತಾ ಶೆಟ್ಟಿ ಆಯ್ಕೆಯಾಗಿದ್ದಾರೆ. 

ನತಾಶ ಎನ್. ಮಂಗಳೂರು, ನಟರಾಜ್ ವಿ.  ಹಾಗೂ  ಆಶಾ ಎನ್. ದಂಪತಿಯ ಪ್ರಥಮ ಪುತ್ರಿ. ವಯಸ್ಸು 10 ವರ್ಷ.  ಇವಳು ಕೊಲ್ಯ ಜೊಯಿಲೆನ್ಡ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಇವಳು ನೃತ್ಯ ಹಾಗೂ ಸಂಗೀತ ತರಬೇತಿಯನ್ನು ಪಡೆಯುತ್ತಿದ್ದಾಳೆ. ಸ್ವಾಮಿ ಕೊರಗಜ್ಜನ ತುಳು ಭಕ್ತಿ ಗೀತೆಗಳು ಮತ್ತು  ಕನ್ನಡ, ತಮಿಳು, ತೆಲುಗು, 65ಕ್ಕೂಹೆಚ್ಚು ವೇದಿಕೆಗಳಲ್ಲಿ ಹಾಡಿದ್ದಾಳೆ. ಕಲಾನಂಜಲಿ ಮತ್ತು ವಾಯ್ಸ್ ಆಫ್ ಆರಾಧನಾ ತಂಡದಲ್ಲಿ ಎರಡು ಮೂರು ಬಾರಿ ಲೈವ್ ಕಾರ್ಯಕ್ರಮ ನೀಡಿದ್ದಾಳೆ. ವಾಯ್ಸ್ ಆಫ್ ಆರಾಧನಾದಲ್ಲಿ ಭಾಗವಹಿಸಿ ಮಲಬಾರ್ ಗೋಲ್ಡ್ ವೀಜೆತಳಾಗಿದ್ದಾಳೆ.

ಸಮಾಜ ಸೇವೆಗಾಗಿ ಅನೇಕ ಲೈವ್ ಕಾರ್ಯಕ್ರಮ ನೀಡಿದ್ದಾಳೆ. ಸ್ವಂದನ ಚಾನೆಲ್ ನಲ್ಲಿ ಭಾಗವಹಿಸಿದ್ದಳು. ನಮ್ಮ ಕುಡ್ಲ ಚಾನೆಲ್‌ನ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದಳು. ರಾಜ್ಯ ಮಟ್ಟದ ಪ್ರಶಸ್ತಿ ಮತ್ತು ಜನ ಸ್ಪಂದ, ಕಲಾ ಕುಸುಮ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರಕಿದೆ. ಕದ್ರಿ ಕಲ್ಕೂರ ಪ್ರತಿಷ್ಟಾನದಲ್ಲಿ , ಶಾಲೆ ಗಳಲ್ಲಿ ನಡೆದ   ನೃತ್ಯ, ಗಾಯನ, ಡ್ರಾಯಿಂಗ್ ಮತ್ತು ಅನೇಕ ಸ್ವರ್ದೆಗಳಲ್ಲಿ ಬಹುಮಾನ ಪಡೆದಿರುತ್ತಾರೆ . ಎಕ್ಸ್ ಪ್ರೆಶನ್ ಉರ್ವದಲ್ಲಿ ನಡೆದ ರಾಧಾಕೃಷ್ಣ ನೃತ್ಯದಲ್ಲಿ ಪ್ರಥಮ ಮತ್ತು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ನಡೆದ ಗಾನಂ ವೇಷಂದಲ್ಲಿ ಭಾಗವಹಿಸಿ ಪ್ರಥಮ ದ್ವಿತೀಯ ಬಹುಮಾನ ಪಡೆದಿರುತ್ತಾರೆ. ಗೌರವ, ಸನ್ಮಾನ ಬಹುಮಾನ ಮತ್ತು ಅನೇಕ ಸಂಘ ಸಂಸ್ಥೆಗಳಲ್ಲಿ ಗೌರವ ಪಡೆದಿದ್ದಾಳೆ.

ಕರ್ನಾಟಕ ಜನಸ್ವಂದನ ಟ್ರಸ್ಟ್ ನಲ್ಲಿ ಭಕ್ತಿ ಗೀತೆಯಲ್ಲಿ ತೃತೀಯ, ಆಶು ಭಾಷಣ ಅತ್ಯುತ್ತಮ ಸ್ಥಾನ ಪಡೆದಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಗೌರವ ದೊರಕಿದೆ. ಸ್ಥಳಿಯ ಕಾರ್ಯಕ್ರಮಗಳಲ್ಲಿ ಭಕ್ತಿಗೀತೆ ಮತ್ತು ಚಲನಚಿತ್ರ ಗೀತೆ ಗಳನ್ನು ಹಾಡಿ ಜನ ಮೆಚ್ಚುಗೆ ಪಡೆದಿದ್ದಾರೆ.

ಕಾಸರಗೋಡು ಜಿಲ್ಲೆಯ ವಿದ್ಯಾನಗರದ ತಿಮ್ಮಪ್ಪ ಶೆಟ್ಟಿ ಹಾಗೂ ಆಶಾ ಶೆಟ್ಟಿ ದಂಪತಿಯ ಮಗಳಾದ ಆಸ್ತಾ ಶೆಟ್ಟಿ ಬೋವಿಕ್ಕಾನದ ಎಯುಪಿಎಸ್ 

ಶಾಲೆಯಲ್ಲಿ 4ನೇ ತರಗತಿಯಲ್ಲಿ  ಓದುತ್ತಿದ್ದಾಳೆ. ಇವಳು ನೃತ್ಯ, ಯೋಗ ಹಾಗೂ ಶಾಸ್ತ್ರೀಯ ಸಂಗೀತ ತರಬೇತಿ ಪಡೆಯುತ್ತಿದ್ದಾಳೆ. ನೃತ್ಯ, ಹಾಡು, ಚಿತ್ರರಚನೆ,  ಕವಿತಾ ರಚನೆ , ಕಥೆ ಹೇಳುವುದು, ಅಭಿನಯ, ಯೋಗ ಮೊದಲಾದವುಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವಳು. ಶಾಲಾ ಮಟ್ಟದಲ್ಲಿ ಅನೇಕ ಬಹುಮಾನಗಳು ಲಭಿಸಿರುತ್ತದೆ. ಕಾಸರಗೋಡು ಸಬ್ ಜಿಲ್ಲಾ ಕಲೋತ್ಸವದಲ್ಲಿ ಅಭಿನಯ ಗೀತೆ ಹಾಗೂ ಕಥೆ ಹೇಳುವ ಸ್ಪರ್ಧೆಯಲ್ಲಿ  ಪ್ರಥಮ ಸ್ಥಾನ ಪಡೆದಿದ್ದಾಳೆ.

ಕಳೆದ ಎರಡು ವರ್ಷಗಳಿಂದ ವಾಯ್ಸ್ ಆಫ್ ಆರಾಧನಾ ಸಂಸ್ಥೆಗೆ ಉತ್ತಮವಾದ ಪ್ರತಿಭಾ ಪ್ರದರ್ಶನಗಳನ್ನು ಕೊಡುತ್ತಾ ಅಚ್ಚುಮೆಚ್ಚಿನ ಪ್ರತಿಭೆ ಎನಿಸಿಕೊಂಡಿದ್ದಾಳೆ. ಅಲ್ಲದೇ ಇವಳು ಮೂರು ಬಾರಿ ಬೆಸ್ಟ್ ಪರ್ಪಾಮರ್  ಕೂಡಾ ಆಗಿದ್ದಳು. ವಾಯ್ಸ್  ಆಫ್ ಆರಾಧನಾ ಸಂಸ್ಥೆ ಇವಳಿಗೆ ವಾಯ್ಸ್  ಆಫ್ ಆರಾಧನಾ ಅವಾರ್ಡ್ ಕೂಡಾ ನೀಡಿ ಗೌರವಿಸಿದೆ.  ಶ್ರೀ ಕೃಷ್ಣ ಯುವಕ ಮಂಡಲ ಆರದಿರಲಿ ಬದುಕು ಆರಾಧನಾ ಸಂಸ್ಥೆ, ಸಿಟಿಗುಡ್ಡೆ ಪುತ್ತೂರು  ಇವರು ಆಸ್ತಾ ಶೆಟ್ಟಿ ಯನ್ನು ಗುರುತಿಸಿ ಸನ್ಮಾನಿಸಿರುತ್ತಾರೆ. ಅನೇಕ ವೇದಿಕೆ ಗಳಲ್ಲಿ ಪ್ರತಿಭಾ ಪ್ರದರ್ಶನ ನೀಡಿರುತ್ತಾಳೆ. ಸ್ಪಂದನಾ ಟಿವಿಯ ಟಾಲೆಂಟ್ ಶೋ ನಲ್ಲಿ ಭಾಗವಹಿಸಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು