8:34 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ: ಜೂನ್ ತಿಂಗಳ ಟಾಪರ್ ಆಗಿ ಮಂಗಳೂರಿನ ಕಾರುಣ್ಯ ಹಾಗೂ ಕಲಬುರಗಿಯ ನೀಲಾಂಬಿಕೆ 

14/07/2022, 21:50

ಮಂಗಳೂರು(reporterkarnataka.com):  ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮಂಗಳೂರಿನ ಕಾರುಣ್ಯ ಎಂ. ಶೆಟ್ಟಿ ಹಾಗೂ ಕಲಬುರಗಿಯ ನೀಲಾಂಬಿಕೆ ಹೀರೇಮಠ್ ಅವರು ಆಯ್ಕೆಯಾಗಿದ್ದಾರೆ. 


ಮೋಹನ್ ಕುಮಾರ್ ಶೆಟ್ಟಿ ಹಾಗೂ ಅನಿತಾ ಎಂ ಶೆಟ್ಟಿ ದಂಪತಿಯ ಪುತ್ರಿ ಕಾರುಣ್ಯ ಎಂ ಶೆಟ್ಟಿ. ಈಕೆ ಮಂಗಳೂರಿನ ಪೋದರ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ 2ನೇ ತರಗತಿಯ ವಿದ್ಯಾರ್ಥಿನಿ. ಭರತನಾಟ್ಯ, ಸಂಗೀತ, ಡಾನ್ಸ್, ಯಕ್ಷಗಾನ, ಯೋಗ, ಸ್ವಿಮ್ಮಿಂಗ್, ಅಭಿನಯ ಕಾರುಣ್ಯಗೆ ಬಲು ಇಷ್ಟ. ಚಿಕ್ಕಂದಿನಿಂದಲೂ ಡಾನ್ಸ್ ನಲ್ಲಿ ಅತಿಯಾದ ಆಸಕ್ತಿಯನ್ನು ಹೊಂದಿದ್ದಳು.ಪ್ರಸ್ತುತ ಈಕೆ ವಿದುಷಿ ಸುನೀತ ಜಯಂತ್ ಉಳ್ಳಾಲ ಅವರಲ್ಲಿ ಭರತನಾಟ್ಯ ಮತ್ತು ಸಂಗೀತ ಅಭ್ಯಾಸ ಮಾಡುತ್ತಾ ಇದ್ದಾಳೆ.  ಚೇತನ ಅವರಲ್ಲಿ ಸಹ ನೃತ್ಯ ಅಭ್ಯಾಸ ಮಾಡುತ್ತಾಳೆ. ಗುರುಗಳಾದ ರಾಕೇಶ್ ರೈ ಅಡ್ಕ ಅವರಲ್ಲಿ ಯಕ್ಷ ನಾಟ್ಯ ಕಲಿಯುತ್ತಿದ್ದಾಳೆ.
ಕಾರುಣ್ಯ ಅವರು ಕೃಷ್ಣ ವೇಷ ಸ್ಪರ್ಧೆ, ಫ್ಯಾನ್ಸಿ ಡ್ರೆಸ್, ಬಂಟರ ಸಂಘ ಹೀಗೆ ಹಲವಾರು ಕಡೆ ಪ್ರಶಸ್ತಿಗಳನ್ನು ಪಡೆದಿದ್ದಾಳೆ. 10-15 ವೇದಿಕೆಗಳಲ್ಲಿ ನೃತ್ಯ ಪ್ರದರ್ಶನವನ್ನು ನೀಡಿರುವ ಆಕೆ ವಾಯ್ಸ್ ಆಫ್ ಆರಾಧನದ ಪದ್ಮಶ್ರೀ ಅವರು ಅವಕಾಶ ನೀಡಿದ ಕಾರಣ ಸ್ಪಂದನ ಟಿವಿ ಹಾಗೂ ಸಾಯಿ ಈಶ್ವರ ಟಿವಿ ಯಲ್ಲಿ ಸಹ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾಳೆ.
ನೀಲಾಂಬಿಕೆ 6ನೇ ತರಗತಿ ವಿದ್ಯಾರ್ಥಿನಿ. ಈಕೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಗ್ರಾಮ ದ ನಂದೀಶ್ವರ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭೆ.  
ತಂದೆ ರೇವಣಸಿದ್ದಯ್ಯ ಹಿರೇಮಠ. ತಾಯಿ ಸೌಭಾಗ್ಯ ಅವರ ಮುದ್ದಿನ ಮಗಳು.
ವಾಯ್ಸ್ ಆಫ್ ಆರಾಧನಾ ಕಾರ್ಯಕ್ರಮದಲ್ಲಿ ಪ್ರತಿ ದಿನ ಭಾಗವಹಿಸಿ ಎರಡು  ಸಲ ಬಹುಮಾನ ಗಳಿಸಿದ್ದಾಳೆ.  

ಓದೋದ್ರಲ್ಲಿ ಬರೆಯೋದರಲ್ಲಿ ತುಂಬಾನೇ ಮುಂದೆ ಇದ್ದಾಳೆ. ಹಾಗೇನೇ ಪಠ್ಯೇತರ ಚಟುವಟಿಕೆಗಳಲ್ಲಿಯೂ ಎತ್ತಿದ ಕೈ. ಚಿತ್ರಕಲೆ ಮತ್ತು ಆನ್ಲೈನ್ ಕ್ವಿಜ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಳೆ. ಡ್ಯಾನ್ಸ್, ಸಂಗೀತ, ಅಭಿನಯ ಇವಳಿಗೆ ಅಚ್ಚುಮೆಚ್ಚು. ಜನಸ್ಪಂದನದಲ್ಲಿ ಭಾಗವಹಿಸಿ 2ನೇ ಸ್ಥಾನ ಪಡೆದಿದ್ದಾಳೆ. ಸ್ವರ ಮಧುರ ಕಾರ್ಯಕ್ರಮದಲ್ಲಿ ಹಾಡಿದ್ದಾಳೆ. ಹಾಡು ಸಂತೋಷಕ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಳೆ. ಸಂಸ್ಕೃತ ಸಿರಿ ಆನ್ಲೈನ್ ಫೋಟೋಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾಳೆ. ಕಲಾ ಪ್ರತಿಭೆಗಳು ಪೇಜ್ ನಲ್ಲಿ ಭಾಗವಹಿಸಿದ್ದಾಳೆ. ಟೆನ್ ಆಫ್ ಟ್ಯಾಲೆಂಟ್ ಆಮಂತ್ರಣ ಹೀಗೆ ಒಂದೊಂದೇ ಹೆಜ್ಜೆ ಇಡುತ್ತಿದ್ದಾಳೆ. ಒಟ್ಟಿನಲ್ಲಿ ನೀಲಾಂಬಿಕೆ ಟ್ಯಾಲೆಂಟ್ ಹೊಂದಿರುವ ಹುಡ್ಗಿ.

 

ಇತ್ತೀಚಿನ ಸುದ್ದಿ

ಜಾಹೀರಾತು