2:05 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ’: ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ರಾವ್ ಹಾಗೂ ದೀಕ್ಷ್ಣಕಲ್ಮಾಡಿ ಆಯ್ಕೆ

07/05/2022, 17:45

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮೇಘನಾ ವಿ. ರಾವ್ ಹಾಗೂ ದೀಕ್ಷ್ಣಎನ್ . ಕಲ್ಮಾಡಿ ಆಯ್ಕೆಗೊಂಡಿದ್ದಾರೆ.

ಪಾಣೆಮಂಗಳೂರು ನಿವಾಸಿಯಾದ ವೆಂಕಟೇಶ್ ರಾವ್ ಬಿ. ಹಾಗೂ ರಶ್ಮಿ ವಿ. ರಾವ್ ಅವರ ಪುತ್ರಿಯಾದ ಮೇಘನಾ 7ನೇ ತರಗತಿಯ ವಿದ್ಯಾರ್ಥಿನಿ. ಬಂಟ್ವಾಳದ ಎಸ್. ವಿ.ಎಸ್. ಸ್ಕೂಲ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದಾಳೆ.
ಸಂಗೀತ, ಚಿತ್ರಕಲೆ, ಡ್ಯಾನ್ಸ್ ನಲ್ಲಿ ಆಸಕ್ತಿ ಹೊಂದಿದ್ದಾಳೆ. ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಆಗಿದ್ದು ಸೀನಿಯರ್ ಕಲಿಯುತ್ತಿದ್ದಾಳೆ. ಗುರುಗಳು ವಿದ್ವಾನ್ ಕೃಷ್ಣ ಆಚಾರ್ಯ ಮತ್ತು ರಜತ ಆಚಾರ್ಯ ಅವರು ಮೇಘನಾಳ ಗುರುಗಳು.
ಸುಗಮ ಸಂಗೀತವನ್ನು ಯಶು ಸ್ನೇಹ ಗಿರಿ ಅವರ ಬಳಿ ಕಲಿಯುತ್ತಿದ್ದಾಳೆ. ಪ್ರತಿಭಾ ಕಾರಂಜಿಯಲ್ಲಿ ನಾಲ್ಕನೇ ತರಗತಿಯಲ್ಲಿ ತಾಲೂಕು ಮಟ್ಟದ ವರೆಗೆ ಹೋಗಿರುತ್ತಾಳೆ. ಸೂಕ್ತ ನ್ಯೂಸ್ ಆಯೋಜಿಸಿರುವ ಗಾನಸಿರಿ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಚಿನ್ನರ ಲೋಕ ಟ್ರಸ್ಟ್ ಆಯೋಜಿಸಿರುವ ಕರಾವಳಿ ಸರಿಗಮಪ ಸ್ಪರ್ಧೆಯಲ್ಲಿ(2021) ಸೆಮಿಫೈನಲಿಸ್ಟ್ ಆಗಿದ್ದಳು. ವಾಯ್ಸ್ ಆಫ್ ಕಲಾಂಜಲಿ ಜೂನಿಯರ್ ಆಡಿಷನ್ ನಲ್ಲಿ ಸೆಲೆಕ್ಟ್ ಆಗಿ ಮುಂದಿನ ಭಾಗಕ್ಕೆ ಆಯ್ಕೆಯಾಗಿದ್ದಾಳೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಡೆಸಿದ ಜೋಕುಲೆನ ತುಳು ಪದ ರಂಗಿತ ಪಂತ ದಲ್ಲಿ ಪ್ರಥಮ ಬಹುಮಾನವನ್ನು ಪಡೆದಿರುತ್ತಾಳೆ. ಮುಳಿಯ ಗಾನ ರಥ 2021 ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮುಂದಿನ ಸುತ್ತಿಗೆ ಆಯ್ಕೆಯಾಗಿರುತ್ತಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು