4:30 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ: ಬಾಲ ಪ್ರತಿಭೆಗಳಾದ ಲಾಲಿತ್ಯ, ಪೂರ್ವಿ ಕಟೀಲು ಆಗಸ್ಟ್ ತಿಂಗಳ ಟಾಪರ್

08/09/2021, 21:56

ಮಂಗಳೂರು(reporterkarnataka.com):

ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಲಾಲಿತ್ಯ ಕುಮಾರ್ ಹಾಗೂ ಪೂರ್ವಿ ಕಟೀಲ್ ಆಯ್ಕೆಗೊಂಡಿದ್ದಾರೆ.

ಲಾಲಿತ್ಯ ಕುಮಾರ್ ಹುಟ್ಟಿದು ಶಿಲ್ಪ ಕಲೆಗಳ ತವರೂರಾದ ಬೇಲೂರಿನಲ್ಲಿ. 3 ವರ್ಷದಿಂದಲೇ ಭರತನಾಟ್ಯ, ಸಂಗೀತ ಅಭ್ಯಾಸ ಮಾಡುವುದರ ಜತೆಗೆ ಕರಾಟೆ ಕೂಡ ಕಲಿಯುತ್ತಿದ್ದಾಳೆ. 

ಭರತನಾಟ್ಯವನ್ನು ವಿಶೇಷ ರೀತಿಯಲ್ಲಿ ನೃತ್ಯ ಕರಗತ ಮಾಡಿಕೊಂಡಿದ್ದಾಳೆ. ಪುಟ್ಟ ವಯಸ್ಸಿನಲ್ಲಿಯೇ ಹಲವು ಜಿಲ್ಲೆ ಹಾಗೂ ಹೊರ ರಾಜ್ಯಗಳಲ್ಲಿಯೂ ನೃತ್ಯ ಪ್ರದರ್ಶನ ನೀಡಿ ಹಲವಾರು ಪ್ರೇಕ್ಷಕರ ಮನ ಗೆದ್ದಿದ್ದಾಳೆ.

ನಾಟ್ಯ ಶಾಂತಲೇ ಪುರಸ್ಕಾರ ಸತತ ಎರಡು ಬಾರಿ ಪಡೆದಿದ್ದಾಳೆ. ಅಷ್ಟೇ ಅಲ್ಲದೆ ನಾಟ್ಯ ಚತುರೆ, ನಾಟ್ಯ ಶಿಲ್ಪ, ನಂದಿ ಅವಾರ್ಡ್, ಒನಕೆ ಓಬ್ಬವ್ವ ಪ್ರಶಸ್ತಿ, ಕರುನಾಡ ಕಣ್ಮಣಿ, ಮಂಜುನಾಥ ರಾಷ್ಟ್ರೀಯ. ಪ್ರಶಸ್ತಿ, ಕಲಾರತ್ನ ರಾಷ್ಟ್ರೀಯ ಪ್ರಶಸ್ತಿ, ಕ್ಲಾಸಿಕಲ್ ಐಕಾನ್ ಪ್ರಶಸ್ತಿ, ರಾಷ್ಟೀಯ ನಾಟ್ಯ ಕರಾವಳಿ ಪ್ರಶಸ್ತಿ, ವಾಯ್ಸ್ ಆಫ್ ಆರಾಧನಾ ಅವಾರ್ಡ್  ಹೀಗೆ ಇನ್ನು ಹಲವಾರು ಪ್ರಶಸ್ತಿ ಪಡೆದಿದ್ದಾಳೆ.

ಪುಟ್ಟ ವಯಸ್ಸಿನಲ್ಲಿಯೇ ಸುಮಾರು 8 ರೆಕಾರ್ಡ್ ಗಳನ್ನು ಸಹ ತನದಾಗಿಸಿಕೊಂಡಿದ್ದಾಳೆ

ಪೂರ್ವಿ ಕಟೀಲು 10ನೇ ತರಗತಿ ವಿದ್ಯಾರ್ಥಿನಿ. ಮುಲ್ಕಿ ಕಿಲ್ಪಾಡಿಯ ಶ್ರೀ ವ್ಯಾಸ ಮಹರ್ಷಿ ವಿದ್ಯಾ ಪೀಠ ಶಿಕ್ಷಣ ಪಡೆಯುತ್ತಿದ್ದಾಳೆ. ತಂದೆ  ಕುಮಾರ್ ಡಿ. ಶೆಟ್ಟಿ  ಹಾಗೂ ತಾಯಿ ರೇಣುಕಾ ಕೆ. ಶೆಟ್ಟಿ.

ಕಿಲ್ಪಾಡಿ ವಿದ್ಯಾ ಪೀಠದಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತಿರುವ ಪೂರ್ವಿ ಒಂದು ವರುಷ ಯಕ್ಷಗಾನ ಕಲಿತು ಲಿಂಗಪ್ಪಯ್ಯಕಾಡಿನಲ್ಲಿ ಸ್ಟೇಜ್ ಪೋಗ್ರಾಮ್ ಕೊಟ್ಟಿದ್ದಾಳೆ. ವಿದ್ಯಾಶ್ರೀ ರಾಧಾಕೃಷ್ಣ ಅವರಿಂದ ಮೂರು ವರುಷದಿಂದ ಭರತನಾಟ್ಯ ಕಲಿಯುತ್ತಿದ್ದಾಳೆ. ಶಿಮಂತೂರು, ಗಿಡಿಗೆರೆ, ತೋಕೂರು ಇನ್ನೂ ಹಲವಾರು ಕಡೆ ಸ್ಟೇಜ್ ಪ್ರೋಗ್ರಾಮ್ ಕೊಟ್ಟಿದ್ದಾಳೆ. ಸಂಗೀತ ಈಕೆಯ ಕನಸು. ಅದರದಲ್ಲಿ ತುಂಬಾ ಆಸಕ್ತಿ ಇದೆ. ಒಂದು ವರುಷ ಕಲಿತು ಅದನ್ನೇ ಮುಂದುವರಿಸಬೇಕೆಂಬ ಆಸೆ ಈಕೆಯದು.

ಇತ್ತೀಚಿನ ಸುದ್ದಿ

ಜಾಹೀರಾತು