5:37 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ

10/08/2025, 19:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರಿ ಪ್ರಮಾಣದ ಮತಗಳ್ಳತನ ವಾಗಿದೆ ಎಂದು ಪರಾಜಿತ ಅಭ್ಯರ್ಥಿ ಹಾಗೂ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಹಳಷ್ಟು ಲೋಪವಾಗಿದೆ. ಬಿಜೆಪಿ ಮತಯಂತ್ರಗಳಲ್ಲಿ ಮತಗಳ್ಳತನ ಮಾಡಿದೆ. ಒಟ್ಟು 2202 ಬೂತ್ ಗಳ ಪೈಕಿ 292 ಬೂತ್ ಗಳಲ್ಲಿ ಮತಗಳ್ಳತನ ವಾಗಿದೆ., 292 ಇವಿಎಂ ಯಂತ್ರದಲ್ಲಿ ರಿಗ್ಗಿoಗ್ ಆಗಿದೆ ಆರೋಪಿಸಿದರು. 292 ಬೂತ್ ಗಳಲ್ಲಿ 1 ಲಕ್ಷದ 45 ಸಾವಿರ ಮತಗಳಿದ್ದು, ಅದರಲ್ಲಿ 22 ಸಾವಿರ ಮತಗಳು ಕಾಂಗ್ರೆಸ್ ಪರ ಬಂದಿವೆ. ಕಳೆದ ನಾಲ್ಕು ಚುನಾವಣೆಗಳಲ್ಲಿ ಇದೇ ಬೂತಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ. 50-60 ಮತಗಳು ಬಂದಿದ್ದವು. ಒಂದು ಬೂತ್ ವ್ಯಾಪ್ತಿಯಲ್ಲಿ 15 ಮನೆಗಳು ಸಂಪೂರ್ಣ ಕಾಂಗ್ರೆಸ್ ಕಾರ್ಯಕರ್ತರದ್ದೇ ಆಗಿದೆ, ಅಲ್ಲಿಗೆ ಇದ್ದ ಅಷ್ಟೂ ಮತಗಳು ಬಿಜೆಪಿಗೆ ಹೋಗಲು ಹೇಗೆ ಸಾಧ್ಯ, ಮೈಸೂರಿನ ನರಸಿಂಹ ರಾಜ ಕ್ಷೇತ್ರದಲ್ಲೂ ಇದೇ ರೀತಿ ಆಗಿದೆ ಎಂದು ಗಂಭೀರ ಆರೋಪ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು