9:38 AM Wednesday10 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್

14/04/2022, 20:50

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.


ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆ ಬಳಿಯ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರಿನಲ್ಲಿ ನಾರಾಯಣ ಗುರುಗಳಿಂದ ಕುದ್ರೋಳಿ ದೇವಾಲಯ ಸ್ಥಾಪಿಸಲ್ಪಟ್ಟಿತ್ತು ಆವಾಗಿನಿಂದಲೇ ಮಂಗಳೂರು ಹಾಗೂ ನಾರಾಯಣಗುರುಗಳ ನಡುವೆ ನಂಟಿದೆ. ನಾರಾಯಣಗುರುಗಳು ಪ್ರಾಥಃಸ್ಮರಣೀಯರು, ತಳಮಟ್ಟದಲ್ಲಿದ್ದ ಸಮುದಾಯವನ್ನು ಮೇಲುಸ್ತರಕ್ಕೆ ತರಲು ಸೌಹಾರ್ದತೆಯನ್ನು ಸಾರಿ ಅಸ್ಪ್ರಸ್ತೆಯನ್ನು ನಿವಾರಣೆ ಮಾಡಲು ಮುನ್ನಡಿ ಇಟ್ಟಿರುವುದನ್ನು ನಾವು ಅರಿತಿದ್ದೇವೆ, ಇಂತಹ ಆದರ್ಶಗಳು ಪೀಳಿಗೆಗಿಂದ ಪೀಳಿಗೆಗೆ ಸಾಗಲು ಈ ರೀತಿಯಾಗಿ ಸ್ಮರಣೀಯವಾಗಿ ಉಳಿಯಲು ವೃತ್ತಗಳಿಗೆ, ಸ್ಮಾರಕಗಳಿಗೆ ನಾಮಕರಣ ಮಾಡುವುದು ಪೂರಕ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹೃದಯದಲ್ಲಿ ನಾರಾಯಣ ಗುರುಗಳ ಬಗ್ಗೆ ಅಭಿಮಾನ ಇದ್ದಿದ್ದರೆ ಯಾರೂ ರಾಜಕೀಯ ಮಾಡುತ್ತಿರಲಿಲ್ಲ, ಅವರು ಅಧಿಕಾರದಲ್ಲಿದ್ದಾಗ ಈ ಕಾರ್ಯ ಮಾಡಬಹುದಿತ್ತು, ಅದೂ ಆಗಲಿಲ್ಲ, ಈಗ ನಾವು ಮಾಡಿದ್ರು ಕಾರ್ಯಕ್ರಮದ ಹಿಂದಿನಿಂದ ತೊಂದರೆ ಕೊಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕುಟುಕಿದರು.

un
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು