8:03 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್

14/04/2022, 20:50

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.


ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆ ಬಳಿಯ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರಿನಲ್ಲಿ ನಾರಾಯಣ ಗುರುಗಳಿಂದ ಕುದ್ರೋಳಿ ದೇವಾಲಯ ಸ್ಥಾಪಿಸಲ್ಪಟ್ಟಿತ್ತು ಆವಾಗಿನಿಂದಲೇ ಮಂಗಳೂರು ಹಾಗೂ ನಾರಾಯಣಗುರುಗಳ ನಡುವೆ ನಂಟಿದೆ. ನಾರಾಯಣಗುರುಗಳು ಪ್ರಾಥಃಸ್ಮರಣೀಯರು, ತಳಮಟ್ಟದಲ್ಲಿದ್ದ ಸಮುದಾಯವನ್ನು ಮೇಲುಸ್ತರಕ್ಕೆ ತರಲು ಸೌಹಾರ್ದತೆಯನ್ನು ಸಾರಿ ಅಸ್ಪ್ರಸ್ತೆಯನ್ನು ನಿವಾರಣೆ ಮಾಡಲು ಮುನ್ನಡಿ ಇಟ್ಟಿರುವುದನ್ನು ನಾವು ಅರಿತಿದ್ದೇವೆ, ಇಂತಹ ಆದರ್ಶಗಳು ಪೀಳಿಗೆಗಿಂದ ಪೀಳಿಗೆಗೆ ಸಾಗಲು ಈ ರೀತಿಯಾಗಿ ಸ್ಮರಣೀಯವಾಗಿ ಉಳಿಯಲು ವೃತ್ತಗಳಿಗೆ, ಸ್ಮಾರಕಗಳಿಗೆ ನಾಮಕರಣ ಮಾಡುವುದು ಪೂರಕ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹೃದಯದಲ್ಲಿ ನಾರಾಯಣ ಗುರುಗಳ ಬಗ್ಗೆ ಅಭಿಮಾನ ಇದ್ದಿದ್ದರೆ ಯಾರೂ ರಾಜಕೀಯ ಮಾಡುತ್ತಿರಲಿಲ್ಲ, ಅವರು ಅಧಿಕಾರದಲ್ಲಿದ್ದಾಗ ಈ ಕಾರ್ಯ ಮಾಡಬಹುದಿತ್ತು, ಅದೂ ಆಗಲಿಲ್ಲ, ಈಗ ನಾವು ಮಾಡಿದ್ರು ಕಾರ್ಯಕ್ರಮದ ಹಿಂದಿನಿಂದ ತೊಂದರೆ ಕೊಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕುಟುಕಿದರು.

un
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು