2:32 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ವಿ.ಟಿ. ರೋಡ್ ಶಾರದಾ ಮಹೋತ್ಸವ ಬೆಳ್ಳಿಹಬ್ಬ: ವಿಜ್ಞಾಪನಾ ಪತ್ರ ಬಿಡುಗಡೆ

29/07/2023, 20:58

ಮಂಗಳೂರು(reporterkarnataka.com):ಶ್ರೀ ಶಾರದಾ ಮಹೋತ್ಸವದ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ವಿ.ಟಿ.ರೋಡ್ ಬಾಲಕ ವೃಂದ (ರಿ) ವತಿಯಿಂದ ಈ ವರ್ಷದ ಶ್ರೀ ಶಾರದಾ ಮಹೋತ್ಸವದ ವಿಜ್ಞಾಪನಾ ಪತ್ರವನ್ನು ವಿ.ಟಿ ರಸ್ತೆಯಲ್ಲಿರುವ ಶ್ರೀಕೃಷ್ಣ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಉತ್ಸಾಹಿ ಯುವಕರು ಸೇರಿ ಪ್ರತಿ ವರ್ಷ ಇಲ್ಲಿ ಶಾರದೋತ್ಸವವನ್ನು ಬಹಳ ಸಡಗರದಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ವರ್ಷ ವಿ.ಟಿ.ರೋಡ್ ಬಾಲಕ ವೃಂದ 25 ನೇ ವರ್ಷದ ಶಾರದ ಮಹೋತ್ಸವವನ್ನು ಆಚರಿಸಲಿದ್ದು, ಸ್ವರ್ಣ ವೀಣೆ ಹಾಗೂ ಬೆಳ್ಳಿಯ ಪ್ರಭಾವಳಿಯನ್ನು ದೇವಿಗೆ ಸಮರ್ಪಿಸಲಿದೆ. ಅದಕ್ಕಾಗಿ ಆಸ್ತಿಕ ಭಕ್ತ ಬಾಂಧವರಿಂದ ಉದಾರ ಕೊಡುಗೆಯನ್ನು ಅಪೇಕ್ಷಿಸಿದೆ. ಇಂತಹ ಮಹತ್ಕಾರ್ಯದಲ್ಲಿ ನಾವೆಲ್ಲರೂ ಸಹಕರಿಸಿ ದೇವಿಯ ಕೃಪೆಗೆ ಪಾತ್ರರಾಗೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಮಂದಿರದ ಅರ್ಚಕರಾದ ವೇದಮೂರ್ತಿ ಕೃಷ್ಣಾನಂದ ಭಟ್, ವಿ.ಟಿ.ರೋಡ್ ಬಾಲಕ ವೃಂದದ ಅಧ್ಯಕ್ಷ ವರುಣ್ ಪೈ, ಕಾರ್ತಿಕ್ ಪೈ, ರಾಜೇಶ್ ಪಡಿಯಾರ್, ನಾರಾಯಣ ನಾಯಕ್, ರಜತ್ ಭಂಡಾರ್ಕರ್, ಉದ್ಯಮಿ ಕುಡ್ಪಿ ಜಗದೀಶ್ ಶೆಣೈ, ಶ್ರೀ ಕೃಷ್ಣ ಮಂದಿರದ ಟ್ರಸ್ಟಿಗಳು, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು