6:48 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ವಿವಿ ಅಂತಾರಾಷ್ಟ್ರೀಯ ಯೋಗ ಕಾರ್ಯಾಗಾರದಲ್ಲಿ ಪುತ್ತೂರಿನ ನೃತ್ಯೋಪಾಸನದಿಂದ ‘ನೃತ್ಯೋಹಂ’

30/01/2024, 15:22

ಕೊಣಾಜೆ(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗ ಹಾಗೂ ಧರ್ಮನಿಧಿ ಯೋಗಪೀಠವು ದಕ್ಷಿಣ ಕೊರಿಯಾದ ವಾಂಕ್ ವಾಂಗ್ ಡಿಜಿಟಲ್ ಯುನಿವರ್ಸಿಟಿ ಸಹಯೋಗದೊಂದಿಗೆ ಏರ್ಪಡಿಸಿದ ‘ ಇಂಟರ್ ನ್ಯಾಷನಲ್ ಯೋಗ ಟೀಚರ್ಸ್ ಟ್ರೈನಿಂಗ್ ಕಾರ್ಯಾಗಾರದಲ್ಲಿ ಪುತ್ತೂರಿನ ವಿದುಷಿ ಶಾಲಿನಿ ಆತ್ಮಭೂಷಣ್ ಅವರ ನೃತ್ಯೋಪಾಸನಾ ಕಲಾ ಅಕಾಡೆಮಿ (ರಿ.) ಪುತ್ತೂರು ಇವರಿಂದ ನೃತ್ಯೋಹಂ ಭರತನಾಟ್ಯ ಕಾರ್ಯಕ್ರಮ ವಿವಿಯ ವೀರೇಂದ್ರ ಹೆಗ್ಗಡೆ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ವಿದೇಶದಿಂದ ಬಂದ ಯೋಗ ಪ್ರತಿನಿಧಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಏರ್ಪಡಿಸಿದ ಈ ಕಾರ್ಯಕ್ರಮವು ಪುಷ್ಪಾಂಜಲಿಯೊಂದಿಗೆ ಆರಂಭಗೊಂಡಿತು. ಒಂದೂವರೆ ಗಂಟೆಗಳ ಕಾಲ ನಡೆದ ಈ ನೃತ್ಯ ಕಾರ್ಯಕ್ರಮದಲ್ಲಿ ಅರ್ಧನಾರೀಶ್ವರ ಸ್ತುತಿ, ವೇಲವ ಎಂದು ಆರಂಭಗೊಂಡ ಸುಬ್ರಹ್ಮಣ್ಯನ ಕುರಿತಾದ ನೃತ್ಯ, ಭಜನ್ ಶೈಲಿಯ ಮರಾಠಿ ಹಾಡಿನ ಬೊಮ್ಮ ಬೊಮ್ಮ, ಕನ್ನಡ ಗೀತೆಗಳಾದ ಅಲ್ಲಿ ನೋಡಲು ರಾಮ ಇಲ್ಲಿ ನೋಡಲು ರಾಮ, ಕುವೆಂಪು ಅವರ ಕುಣಿಯೋಣಾರು, ಕಾಂತಾರದ ಜನಪ್ರಿಯ ಹಾಡಾದ ವರಾಹರೂಪಂ,ತುಳು ಗೀತೆ ಎಂಚೆಂಚಿ ಪುಣ್ಣುಲು ಎಂಕುಲತ್ತ್ ಮೊದಲಾದ ಬಹುಭಾಷೆ ಮತ್ತು ಸಂಸ್ಕೃತಿಯ ಭಾವವನ್ನು ತಂಡ ನೃತ್ಯರೂಪದಲ್ಲಿ ಪ್ರದರ್ಶಿಸಿತು.
ಕೊನೆಯಲ್ಲಿ ಯೋಗ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಪ್ರೊ.ಕೃಷ್ಣಶರ್ಮ ಮತ್ತು ದಕ್ಷಿಣ ಕೊರಿಯಾ ವಿವಿಯ ಪ್ರತಿನಿಧಿಗಳು ವಿದುಷಿ ಶಾಲಿನಿ ಆತ್ಮಭೂಷಣ್ ಇವರನ್ನು ಗೌರವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು