5:59 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಘಟಿಕೋತ್ಸವ: ರಾಜ್ಯಪಾಲರ ನಡೆಗೆ ಎನ್ ಎಸ್ ಯುಐ ತೀವ್ರ ಖಂಡನೆ

17/06/2024, 21:07

ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದ ವೇಳೆ ರಾಜ್ಯಪಾಲರ ನಡೆ ಕುರಿತು ಎನ್ ಎಸ್ ಯುಐ ತೀವ್ರ
ಖಂಡನೆ ವ್ಯಕ್ತಪಡಿಸಿದೆ.
ಘಟಿಕೋತ್ಸವ ಕಾರ್ಯಕ್ರಮ ಹಲವಾರು ವರ್ಷಗಳಿಂದ ಉತ್ತಮ ಗುಣಮಟ್ಟದಲ್ಲಿ ನಡೆಯುತ್ತಾ ಬಂದಿದೆ. ಆದರೆ ಈ ವರ್ಷ ನಡೆದ ಘಟಿಕೋತ್ಸವ ಕಾರ್ಯಕ್ರಮ ಉತ್ತಮ ರೂಪುರೇಷೆಯನ್ನು ಒಳಗೊಂಡಿತ್ತು. ಕಾರ್ಯಕ್ರಮದ ಸಂಪೂರ್ಣ ವರದಿ ರಾಜ್ಯಪಾಲರಿಗೆ ಗೊತ್ತಿತ್ತು.
ಆದರೆ ವೇದಿಕೆಗೆ ಬಂದ ಮೇಲೆ ರಾಜ್ಯಪಾಲರು ಹಾಗೂ ಅವರ ಅಧಿಕಾರಿ ವರ್ಗ ಕಾರ್ಯಕ್ರಮವನ್ನು ಒಟ್ಟು ಗೊಂದಲಕ್ಕೆ ಎಡೆಮಾಡಿ ಕೊಟ್ಟಿರೋದು ಅತೀವ ಬೇಸರ ತಂದಿದೆ. ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿಗೆ ಸಾಮೂಹಿಕವಾಗಿ ಕಾಣಾಚಾರಕ್ಕೆ ನೀಡಿದ ಡಾಕ್ಟರೇಟ್ ಅಂತಿತ್ತು. ನಮ್ಮ ವಿಶ್ವವಿದ್ಯಾನಿಲಯ ಉಪಕುಲಪತಿಗಳ ಜೊತೆಗೆ ನಡೆದು ಕೊಂಡ ವರ್ತನೆಯೂ ರಾಜ್ಯಭಾರ ಮೆರೆಯುವಂತಿತ್ತು.
ಒಟ್ಟಿನಲ್ಲಿ ಒಂದು ಉತ್ತಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಜ್ಯಪಾಲರು ಹಾಗೂ ಅವರ ಅಧಿಕಾರಿ ವರ್ಗದ ಅನಾವಶ್ಯಕ ಗೊಂದಲದ ಹಸ್ತಕ್ಷೇಪದಿಂದ ಅಸ್ತವ್ಯಸ್ತಕ್ಕೆ ಕಾರಣವಾಯಿತು.
ರಾಜ್ಯಪಾಲರ ಈ ರಾಜ್ಯಭಾರವನ್ನು ಎನ್ ಎಸ್ ಯುಐ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರು ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು