12:10 AM Friday27 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಘಟಿಕೋತ್ಸವ: ರಾಜ್ಯಪಾಲರ ನಡೆಗೆ ಎನ್ ಎಸ್ ಯುಐ ತೀವ್ರ ಖಂಡನೆ

17/06/2024, 21:07

ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದ ವೇಳೆ ರಾಜ್ಯಪಾಲರ ನಡೆ ಕುರಿತು ಎನ್ ಎಸ್ ಯುಐ ತೀವ್ರ
ಖಂಡನೆ ವ್ಯಕ್ತಪಡಿಸಿದೆ.
ಘಟಿಕೋತ್ಸವ ಕಾರ್ಯಕ್ರಮ ಹಲವಾರು ವರ್ಷಗಳಿಂದ ಉತ್ತಮ ಗುಣಮಟ್ಟದಲ್ಲಿ ನಡೆಯುತ್ತಾ ಬಂದಿದೆ. ಆದರೆ ಈ ವರ್ಷ ನಡೆದ ಘಟಿಕೋತ್ಸವ ಕಾರ್ಯಕ್ರಮ ಉತ್ತಮ ರೂಪುರೇಷೆಯನ್ನು ಒಳಗೊಂಡಿತ್ತು. ಕಾರ್ಯಕ್ರಮದ ಸಂಪೂರ್ಣ ವರದಿ ರಾಜ್ಯಪಾಲರಿಗೆ ಗೊತ್ತಿತ್ತು.
ಆದರೆ ವೇದಿಕೆಗೆ ಬಂದ ಮೇಲೆ ರಾಜ್ಯಪಾಲರು ಹಾಗೂ ಅವರ ಅಧಿಕಾರಿ ವರ್ಗ ಕಾರ್ಯಕ್ರಮವನ್ನು ಒಟ್ಟು ಗೊಂದಲಕ್ಕೆ ಎಡೆಮಾಡಿ ಕೊಟ್ಟಿರೋದು ಅತೀವ ಬೇಸರ ತಂದಿದೆ. ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿಗೆ ಸಾಮೂಹಿಕವಾಗಿ ಕಾಣಾಚಾರಕ್ಕೆ ನೀಡಿದ ಡಾಕ್ಟರೇಟ್ ಅಂತಿತ್ತು. ನಮ್ಮ ವಿಶ್ವವಿದ್ಯಾನಿಲಯ ಉಪಕುಲಪತಿಗಳ ಜೊತೆಗೆ ನಡೆದು ಕೊಂಡ ವರ್ತನೆಯೂ ರಾಜ್ಯಭಾರ ಮೆರೆಯುವಂತಿತ್ತು.
ಒಟ್ಟಿನಲ್ಲಿ ಒಂದು ಉತ್ತಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಜ್ಯಪಾಲರು ಹಾಗೂ ಅವರ ಅಧಿಕಾರಿ ವರ್ಗದ ಅನಾವಶ್ಯಕ ಗೊಂದಲದ ಹಸ್ತಕ್ಷೇಪದಿಂದ ಅಸ್ತವ್ಯಸ್ತಕ್ಕೆ ಕಾರಣವಾಯಿತು.
ರಾಜ್ಯಪಾಲರ ಈ ರಾಜ್ಯಭಾರವನ್ನು ಎನ್ ಎಸ್ ಯುಐ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರು ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು