3:06 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಘಟಿಕೋತ್ಸವ: ರಾಜ್ಯಪಾಲರ ನಡೆಗೆ ಎನ್ ಎಸ್ ಯುಐ ತೀವ್ರ ಖಂಡನೆ

17/06/2024, 21:07

ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದ ವೇಳೆ ರಾಜ್ಯಪಾಲರ ನಡೆ ಕುರಿತು ಎನ್ ಎಸ್ ಯುಐ ತೀವ್ರ
ಖಂಡನೆ ವ್ಯಕ್ತಪಡಿಸಿದೆ.
ಘಟಿಕೋತ್ಸವ ಕಾರ್ಯಕ್ರಮ ಹಲವಾರು ವರ್ಷಗಳಿಂದ ಉತ್ತಮ ಗುಣಮಟ್ಟದಲ್ಲಿ ನಡೆಯುತ್ತಾ ಬಂದಿದೆ. ಆದರೆ ಈ ವರ್ಷ ನಡೆದ ಘಟಿಕೋತ್ಸವ ಕಾರ್ಯಕ್ರಮ ಉತ್ತಮ ರೂಪುರೇಷೆಯನ್ನು ಒಳಗೊಂಡಿತ್ತು. ಕಾರ್ಯಕ್ರಮದ ಸಂಪೂರ್ಣ ವರದಿ ರಾಜ್ಯಪಾಲರಿಗೆ ಗೊತ್ತಿತ್ತು.
ಆದರೆ ವೇದಿಕೆಗೆ ಬಂದ ಮೇಲೆ ರಾಜ್ಯಪಾಲರು ಹಾಗೂ ಅವರ ಅಧಿಕಾರಿ ವರ್ಗ ಕಾರ್ಯಕ್ರಮವನ್ನು ಒಟ್ಟು ಗೊಂದಲಕ್ಕೆ ಎಡೆಮಾಡಿ ಕೊಟ್ಟಿರೋದು ಅತೀವ ಬೇಸರ ತಂದಿದೆ. ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿಗೆ ಸಾಮೂಹಿಕವಾಗಿ ಕಾಣಾಚಾರಕ್ಕೆ ನೀಡಿದ ಡಾಕ್ಟರೇಟ್ ಅಂತಿತ್ತು. ನಮ್ಮ ವಿಶ್ವವಿದ್ಯಾನಿಲಯ ಉಪಕುಲಪತಿಗಳ ಜೊತೆಗೆ ನಡೆದು ಕೊಂಡ ವರ್ತನೆಯೂ ರಾಜ್ಯಭಾರ ಮೆರೆಯುವಂತಿತ್ತು.
ಒಟ್ಟಿನಲ್ಲಿ ಒಂದು ಉತ್ತಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಜ್ಯಪಾಲರು ಹಾಗೂ ಅವರ ಅಧಿಕಾರಿ ವರ್ಗದ ಅನಾವಶ್ಯಕ ಗೊಂದಲದ ಹಸ್ತಕ್ಷೇಪದಿಂದ ಅಸ್ತವ್ಯಸ್ತಕ್ಕೆ ಕಾರಣವಾಯಿತು.
ರಾಜ್ಯಪಾಲರ ಈ ರಾಜ್ಯಭಾರವನ್ನು ಎನ್ ಎಸ್ ಯುಐ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ ಅವರು ಖಂಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು