9:49 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

Vyasashrama | ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ ತಿರುಪತಿ ಲಡ್ಡು ಪ್ರಸಾದ ವಿತರಣೆ

14/04/2025, 16:19

ಮಂಗಳೂರು(reporterkarnataka.com): ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ‌ ಕಾರ್ಯಕ್ರಮ ಹರಿದ್ವಾರದಲ್ಲಿ ಭಾನುವಾರ ಜರುಗಿತು.


ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹರಿದ್ವಾರದ ವ್ಯಾಸಾಶ್ರಮದಲ್ಲಿ ಏಪ್ರಿಲ್ 8 ರಿಂದ 14ರ ತನಕ ವಿಶೇಷ ಕಾರ್ಯಕ್ರಮಗಳು‌ ಜರಗುತ್ತಿದ್ದು, ಭಾನುವಾರ ಏಪ್ರಿಲ್ 13ರಂದು ಭಾರತದ ವಿವಿಧ ಭಾಗಗಳಿಂದ ಆಗಮಿಸಿದ 30 ಭಜನಾ ಮಂಡಳಿಗಳಿಂದ ಏಕಾಹ ಭಜನೆ, ವಿವಿಧ ಹೋಮ, ಹವನಾದಿಗಳು ಶ್ರೀಮದ್ ಸಂಯಮೀಂದ್ರ ‌ತೀರ್ಥ‌ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ತಿರುಪತಿಯಿಂದ ವಿಶೇಷವಾಗಿ ತರಿಸಲಾದ ಲಾಡು ಪ್ರಸಾದವನ್ನು‌ ಹಂಚುವ ಕಾರ್ಯದ ಪೂರ್ವಭಾವಿ ಸಿದ್ಧತೆಯಲ್ಲಿ ಭಕ್ತರು ತೊಡಗಿಸಿಕೊಂಡಿದ್ದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ‌ ಸೇವಾ ಪ್ರತಿಷ್ಠಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಜಿಎಸ್ ಬಿ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಸಿಕೊಂಡಿದ್ದಾರೆ.
ಸೋಮವಾರ ಏಪ್ರಿಲ್ 14 ರಂದು ವ್ಯಾಸ ಮಂದಿರದಲ್ಲಿರುವ ಶ್ರೀ ವೇದವ್ಯಾಸ ದೇವರಿಗೆ ಮತ್ತು ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನಕ್ಕೆ ವಿಶೇಷ ಪವಮಾನ‌ ಅಭಿಷೇಕ ನಡೆಯಿತು.‌ ಅದರೊಂದಿಗೆ ವೃಂದಾವನ ಹಾಗೂ ಪಾದುಕೆಗೆ ಸ್ವರ್ಣ ಪುಷ್ಪಾರ್ಚನೆಯೂ ಜರುಗಿತು. ಸಂಜೆ ಶ್ರೀಗಳಿಂದ ಆರ್ಶೀವಚನವೂ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು