7:03 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

Vyasashrama | ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ ತಿರುಪತಿ ಲಡ್ಡು ಪ್ರಸಾದ ವಿತರಣೆ

14/04/2025, 16:19

ಮಂಗಳೂರು(reporterkarnataka.com): ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ‌ ಕಾರ್ಯಕ್ರಮ ಹರಿದ್ವಾರದಲ್ಲಿ ಭಾನುವಾರ ಜರುಗಿತು.


ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹರಿದ್ವಾರದ ವ್ಯಾಸಾಶ್ರಮದಲ್ಲಿ ಏಪ್ರಿಲ್ 8 ರಿಂದ 14ರ ತನಕ ವಿಶೇಷ ಕಾರ್ಯಕ್ರಮಗಳು‌ ಜರಗುತ್ತಿದ್ದು, ಭಾನುವಾರ ಏಪ್ರಿಲ್ 13ರಂದು ಭಾರತದ ವಿವಿಧ ಭಾಗಗಳಿಂದ ಆಗಮಿಸಿದ 30 ಭಜನಾ ಮಂಡಳಿಗಳಿಂದ ಏಕಾಹ ಭಜನೆ, ವಿವಿಧ ಹೋಮ, ಹವನಾದಿಗಳು ಶ್ರೀಮದ್ ಸಂಯಮೀಂದ್ರ ‌ತೀರ್ಥ‌ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ತಿರುಪತಿಯಿಂದ ವಿಶೇಷವಾಗಿ ತರಿಸಲಾದ ಲಾಡು ಪ್ರಸಾದವನ್ನು‌ ಹಂಚುವ ಕಾರ್ಯದ ಪೂರ್ವಭಾವಿ ಸಿದ್ಧತೆಯಲ್ಲಿ ಭಕ್ತರು ತೊಡಗಿಸಿಕೊಂಡಿದ್ದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ‌ ಸೇವಾ ಪ್ರತಿಷ್ಠಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಜಿಎಸ್ ಬಿ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಸಿಕೊಂಡಿದ್ದಾರೆ.
ಸೋಮವಾರ ಏಪ್ರಿಲ್ 14 ರಂದು ವ್ಯಾಸ ಮಂದಿರದಲ್ಲಿರುವ ಶ್ರೀ ವೇದವ್ಯಾಸ ದೇವರಿಗೆ ಮತ್ತು ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನಕ್ಕೆ ವಿಶೇಷ ಪವಮಾನ‌ ಅಭಿಷೇಕ ನಡೆಯಿತು.‌ ಅದರೊಂದಿಗೆ ವೃಂದಾವನ ಹಾಗೂ ಪಾದುಕೆಗೆ ಸ್ವರ್ಣ ಪುಷ್ಪಾರ್ಚನೆಯೂ ಜರುಗಿತು. ಸಂಜೆ ಶ್ರೀಗಳಿಂದ ಆರ್ಶೀವಚನವೂ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು