10:22 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

Vyasashrama | ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ ತಿರುಪತಿ ಲಡ್ಡು ಪ್ರಸಾದ ವಿತರಣೆ

14/04/2025, 16:19

ಮಂಗಳೂರು(reporterkarnataka.com): ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ‌ ಕಾರ್ಯಕ್ರಮ ಹರಿದ್ವಾರದಲ್ಲಿ ಭಾನುವಾರ ಜರುಗಿತು.


ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹರಿದ್ವಾರದ ವ್ಯಾಸಾಶ್ರಮದಲ್ಲಿ ಏಪ್ರಿಲ್ 8 ರಿಂದ 14ರ ತನಕ ವಿಶೇಷ ಕಾರ್ಯಕ್ರಮಗಳು‌ ಜರಗುತ್ತಿದ್ದು, ಭಾನುವಾರ ಏಪ್ರಿಲ್ 13ರಂದು ಭಾರತದ ವಿವಿಧ ಭಾಗಗಳಿಂದ ಆಗಮಿಸಿದ 30 ಭಜನಾ ಮಂಡಳಿಗಳಿಂದ ಏಕಾಹ ಭಜನೆ, ವಿವಿಧ ಹೋಮ, ಹವನಾದಿಗಳು ಶ್ರೀಮದ್ ಸಂಯಮೀಂದ್ರ ‌ತೀರ್ಥ‌ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ತಿರುಪತಿಯಿಂದ ವಿಶೇಷವಾಗಿ ತರಿಸಲಾದ ಲಾಡು ಪ್ರಸಾದವನ್ನು‌ ಹಂಚುವ ಕಾರ್ಯದ ಪೂರ್ವಭಾವಿ ಸಿದ್ಧತೆಯಲ್ಲಿ ಭಕ್ತರು ತೊಡಗಿಸಿಕೊಂಡಿದ್ದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ‌ ಸೇವಾ ಪ್ರತಿಷ್ಠಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಜಿಎಸ್ ಬಿ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಸಿಕೊಂಡಿದ್ದಾರೆ.
ಸೋಮವಾರ ಏಪ್ರಿಲ್ 14 ರಂದು ವ್ಯಾಸ ಮಂದಿರದಲ್ಲಿರುವ ಶ್ರೀ ವೇದವ್ಯಾಸ ದೇವರಿಗೆ ಮತ್ತು ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನಕ್ಕೆ ವಿಶೇಷ ಪವಮಾನ‌ ಅಭಿಷೇಕ ನಡೆಯಿತು.‌ ಅದರೊಂದಿಗೆ ವೃಂದಾವನ ಹಾಗೂ ಪಾದುಕೆಗೆ ಸ್ವರ್ಣ ಪುಷ್ಪಾರ್ಚನೆಯೂ ಜರುಗಿತು. ಸಂಜೆ ಶ್ರೀಗಳಿಂದ ಆರ್ಶೀವಚನವೂ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು