8:54 PM Tuesday19 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

Vyasashrama | ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ ತಿರುಪತಿ ಲಡ್ಡು ಪ್ರಸಾದ ವಿತರಣೆ

14/04/2025, 16:19

ಮಂಗಳೂರು(reporterkarnataka.com): ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ‌ ಕಾರ್ಯಕ್ರಮ ಹರಿದ್ವಾರದಲ್ಲಿ ಭಾನುವಾರ ಜರುಗಿತು.


ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹರಿದ್ವಾರದ ವ್ಯಾಸಾಶ್ರಮದಲ್ಲಿ ಏಪ್ರಿಲ್ 8 ರಿಂದ 14ರ ತನಕ ವಿಶೇಷ ಕಾರ್ಯಕ್ರಮಗಳು‌ ಜರಗುತ್ತಿದ್ದು, ಭಾನುವಾರ ಏಪ್ರಿಲ್ 13ರಂದು ಭಾರತದ ವಿವಿಧ ಭಾಗಗಳಿಂದ ಆಗಮಿಸಿದ 30 ಭಜನಾ ಮಂಡಳಿಗಳಿಂದ ಏಕಾಹ ಭಜನೆ, ವಿವಿಧ ಹೋಮ, ಹವನಾದಿಗಳು ಶ್ರೀಮದ್ ಸಂಯಮೀಂದ್ರ ‌ತೀರ್ಥ‌ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ತಿರುಪತಿಯಿಂದ ವಿಶೇಷವಾಗಿ ತರಿಸಲಾದ ಲಾಡು ಪ್ರಸಾದವನ್ನು‌ ಹಂಚುವ ಕಾರ್ಯದ ಪೂರ್ವಭಾವಿ ಸಿದ್ಧತೆಯಲ್ಲಿ ಭಕ್ತರು ತೊಡಗಿಸಿಕೊಂಡಿದ್ದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ‌ ಸೇವಾ ಪ್ರತಿಷ್ಠಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಜಿಎಸ್ ಬಿ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಸಿಕೊಂಡಿದ್ದಾರೆ.
ಸೋಮವಾರ ಏಪ್ರಿಲ್ 14 ರಂದು ವ್ಯಾಸ ಮಂದಿರದಲ್ಲಿರುವ ಶ್ರೀ ವೇದವ್ಯಾಸ ದೇವರಿಗೆ ಮತ್ತು ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನಕ್ಕೆ ವಿಶೇಷ ಪವಮಾನ‌ ಅಭಿಷೇಕ ನಡೆಯಿತು.‌ ಅದರೊಂದಿಗೆ ವೃಂದಾವನ ಹಾಗೂ ಪಾದುಕೆಗೆ ಸ್ವರ್ಣ ಪುಷ್ಪಾರ್ಚನೆಯೂ ಜರುಗಿತು. ಸಂಜೆ ಶ್ರೀಗಳಿಂದ ಆರ್ಶೀವಚನವೂ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು