3:18 PM Sunday14 - December 2025
ಬ್ರೇಕಿಂಗ್ ನ್ಯೂಸ್
ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್…

ಇತ್ತೀಚಿನ ಸುದ್ದಿ

Vyasashrama | ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ ತಿರುಪತಿ ಲಡ್ಡು ಪ್ರಸಾದ ವಿತರಣೆ

14/04/2025, 16:19

ಮಂಗಳೂರು(reporterkarnataka.com): ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ‌ ಕಾರ್ಯಕ್ರಮ ಹರಿದ್ವಾರದಲ್ಲಿ ಭಾನುವಾರ ಜರುಗಿತು.


ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹರಿದ್ವಾರದ ವ್ಯಾಸಾಶ್ರಮದಲ್ಲಿ ಏಪ್ರಿಲ್ 8 ರಿಂದ 14ರ ತನಕ ವಿಶೇಷ ಕಾರ್ಯಕ್ರಮಗಳು‌ ಜರಗುತ್ತಿದ್ದು, ಭಾನುವಾರ ಏಪ್ರಿಲ್ 13ರಂದು ಭಾರತದ ವಿವಿಧ ಭಾಗಗಳಿಂದ ಆಗಮಿಸಿದ 30 ಭಜನಾ ಮಂಡಳಿಗಳಿಂದ ಏಕಾಹ ಭಜನೆ, ವಿವಿಧ ಹೋಮ, ಹವನಾದಿಗಳು ಶ್ರೀಮದ್ ಸಂಯಮೀಂದ್ರ ‌ತೀರ್ಥ‌ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ತಿರುಪತಿಯಿಂದ ವಿಶೇಷವಾಗಿ ತರಿಸಲಾದ ಲಾಡು ಪ್ರಸಾದವನ್ನು‌ ಹಂಚುವ ಕಾರ್ಯದ ಪೂರ್ವಭಾವಿ ಸಿದ್ಧತೆಯಲ್ಲಿ ಭಕ್ತರು ತೊಡಗಿಸಿಕೊಂಡಿದ್ದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ‌ ಸೇವಾ ಪ್ರತಿಷ್ಠಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಜಿಎಸ್ ಬಿ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಸಿಕೊಂಡಿದ್ದಾರೆ.
ಸೋಮವಾರ ಏಪ್ರಿಲ್ 14 ರಂದು ವ್ಯಾಸ ಮಂದಿರದಲ್ಲಿರುವ ಶ್ರೀ ವೇದವ್ಯಾಸ ದೇವರಿಗೆ ಮತ್ತು ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನಕ್ಕೆ ವಿಶೇಷ ಪವಮಾನ‌ ಅಭಿಷೇಕ ನಡೆಯಿತು.‌ ಅದರೊಂದಿಗೆ ವೃಂದಾವನ ಹಾಗೂ ಪಾದುಕೆಗೆ ಸ್ವರ್ಣ ಪುಷ್ಪಾರ್ಚನೆಯೂ ಜರುಗಿತು. ಸಂಜೆ ಶ್ರೀಗಳಿಂದ ಆರ್ಶೀವಚನವೂ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು