11:01 AM Sunday4 - January 2026
ಬ್ರೇಕಿಂಗ್ ನ್ಯೂಸ್
Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ…

ಇತ್ತೀಚಿನ ಸುದ್ದಿ

Vyasashrama | ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ ತಿರುಪತಿ ಲಡ್ಡು ಪ್ರಸಾದ ವಿತರಣೆ

14/04/2025, 16:19

ಮಂಗಳೂರು(reporterkarnataka.com): ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ‌ ಕಾರ್ಯಕ್ರಮ ಹರಿದ್ವಾರದಲ್ಲಿ ಭಾನುವಾರ ಜರುಗಿತು.


ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹರಿದ್ವಾರದ ವ್ಯಾಸಾಶ್ರಮದಲ್ಲಿ ಏಪ್ರಿಲ್ 8 ರಿಂದ 14ರ ತನಕ ವಿಶೇಷ ಕಾರ್ಯಕ್ರಮಗಳು‌ ಜರಗುತ್ತಿದ್ದು, ಭಾನುವಾರ ಏಪ್ರಿಲ್ 13ರಂದು ಭಾರತದ ವಿವಿಧ ಭಾಗಗಳಿಂದ ಆಗಮಿಸಿದ 30 ಭಜನಾ ಮಂಡಳಿಗಳಿಂದ ಏಕಾಹ ಭಜನೆ, ವಿವಿಧ ಹೋಮ, ಹವನಾದಿಗಳು ಶ್ರೀಮದ್ ಸಂಯಮೀಂದ್ರ ‌ತೀರ್ಥ‌ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ತಿರುಪತಿಯಿಂದ ವಿಶೇಷವಾಗಿ ತರಿಸಲಾದ ಲಾಡು ಪ್ರಸಾದವನ್ನು‌ ಹಂಚುವ ಕಾರ್ಯದ ಪೂರ್ವಭಾವಿ ಸಿದ್ಧತೆಯಲ್ಲಿ ಭಕ್ತರು ತೊಡಗಿಸಿಕೊಂಡಿದ್ದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ‌ ಸೇವಾ ಪ್ರತಿಷ್ಠಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಜಿಎಸ್ ಬಿ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಸಿಕೊಂಡಿದ್ದಾರೆ.
ಸೋಮವಾರ ಏಪ್ರಿಲ್ 14 ರಂದು ವ್ಯಾಸ ಮಂದಿರದಲ್ಲಿರುವ ಶ್ರೀ ವೇದವ್ಯಾಸ ದೇವರಿಗೆ ಮತ್ತು ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನಕ್ಕೆ ವಿಶೇಷ ಪವಮಾನ‌ ಅಭಿಷೇಕ ನಡೆಯಿತು.‌ ಅದರೊಂದಿಗೆ ವೃಂದಾವನ ಹಾಗೂ ಪಾದುಕೆಗೆ ಸ್ವರ್ಣ ಪುಷ್ಪಾರ್ಚನೆಯೂ ಜರುಗಿತು. ಸಂಜೆ ಶ್ರೀಗಳಿಂದ ಆರ್ಶೀವಚನವೂ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು