4:48 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

Vyasashrama | ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ ತಿರುಪತಿ ಲಡ್ಡು ಪ್ರಸಾದ ವಿತರಣೆ

14/04/2025, 16:19

ಮಂಗಳೂರು(reporterkarnataka.com): ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರ ದಿಗ್ವಿಜಯ‌ ಕಾರ್ಯಕ್ರಮ ಹರಿದ್ವಾರದಲ್ಲಿ ಭಾನುವಾರ ಜರುಗಿತು.


ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹರಿದ್ವಾರದ ವ್ಯಾಸಾಶ್ರಮದಲ್ಲಿ ಏಪ್ರಿಲ್ 8 ರಿಂದ 14ರ ತನಕ ವಿಶೇಷ ಕಾರ್ಯಕ್ರಮಗಳು‌ ಜರಗುತ್ತಿದ್ದು, ಭಾನುವಾರ ಏಪ್ರಿಲ್ 13ರಂದು ಭಾರತದ ವಿವಿಧ ಭಾಗಗಳಿಂದ ಆಗಮಿಸಿದ 30 ಭಜನಾ ಮಂಡಳಿಗಳಿಂದ ಏಕಾಹ ಭಜನೆ, ವಿವಿಧ ಹೋಮ, ಹವನಾದಿಗಳು ಶ್ರೀಮದ್ ಸಂಯಮೀಂದ್ರ ‌ತೀರ್ಥ‌ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ತಿರುಪತಿಯಿಂದ ವಿಶೇಷವಾಗಿ ತರಿಸಲಾದ ಲಾಡು ಪ್ರಸಾದವನ್ನು‌ ಹಂಚುವ ಕಾರ್ಯದ ಪೂರ್ವಭಾವಿ ಸಿದ್ಧತೆಯಲ್ಲಿ ಭಕ್ತರು ತೊಡಗಿಸಿಕೊಂಡಿದ್ದರು. ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ‌ ಸೇವಾ ಪ್ರತಿಷ್ಠಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಜಿಎಸ್ ಬಿ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಸಿಕೊಂಡಿದ್ದಾರೆ.
ಸೋಮವಾರ ಏಪ್ರಿಲ್ 14 ರಂದು ವ್ಯಾಸ ಮಂದಿರದಲ್ಲಿರುವ ಶ್ರೀ ವೇದವ್ಯಾಸ ದೇವರಿಗೆ ಮತ್ತು ಸುಧೀಂದ್ರ ತೀರ್ಥ ಸ್ವಾಮೀಜಿಯವರ ವೃಂದಾವನಕ್ಕೆ ವಿಶೇಷ ಪವಮಾನ‌ ಅಭಿಷೇಕ ನಡೆಯಿತು.‌ ಅದರೊಂದಿಗೆ ವೃಂದಾವನ ಹಾಗೂ ಪಾದುಕೆಗೆ ಸ್ವರ್ಣ ಪುಷ್ಪಾರ್ಚನೆಯೂ ಜರುಗಿತು. ಸಂಜೆ ಶ್ರೀಗಳಿಂದ ಆರ್ಶೀವಚನವೂ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು