3:02 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ವ್ಯವಹಾರದಲ್ಲಿನ ಅಡೆತಡೆಗಳ ನಿವಾರಣೆ: ಎನ್‌ಆರ್‌ಐ ಉದ್ಯಮಿ ಮೈಕಲ್ ಡಿಸೋಜಾರಿಂದ ವಿಚಾರ ಸಂಕಿರಣ

01/06/2023, 11:42

ಮಂಗಳೂರು(reporterkarnataka.com): ರಚನಾ, ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ವತಿಯಿಂದ ಮಂಗಳೂರು ಕ್ಲಬ್‌ನಲ್ಲಿ ೨೮ ಮೇ 28ರಂದು ಸಂಜೆ 7 ಗಂಟೆಗೆ ಸದಸ್ಯರ ಸಭೆಯನ್ನು ನಡೆಸಲಾಯಿತು.
ಎನ್‌ಆರ್‌ಐ ಉದ್ಯಮಿ ಮೈಕೆಲ್ ಡಿಸೋಜಾ ಮುಖ್ಯ ಅತಿಥಿ ಮತ್ತು ಪ್ರಮುಖ ಭಾಷಣಕಾರರಾಗಿದ್ದರು.


ಮೈಕಲ್ ಡಿಸೋಜರವರು ಪರಿಶ್ರಮದ ಶಕ್ತಿ ಮತ್ತು ವ್ಯವಹಾರದ ಮೂಲಕ ವಿಪತ್ತುಗಳನ್ನು ನಿವಾರಿಸುವ ಬಗ್ಗೆ, ಪುತ್ತೂರಿನ ಪುಟ್ಟ ಊರಿನಿಂದ ಬಂದ ತಮ್ಮ ಜೀವನ ಪಯಣದ ಬಗ್ಗೆ ಮಾತನಾಡಿದರು. ಇವರು ತಮ್ಮ ಸಣ್ಣ ವಯಸ್ಸಿನಲ್ಲಿ ತಮ್ಮ ವ್ಯಾಪಾರವನ್ನು ಪ್ರಾರಂಭಿಸಿದರು. ನಂತರ ಯುಎಇಯಲ್ಲಿನ ವ್ಯಾಪಾರ ಸಾಮರ್ಥ್ಯದ ಬಗ್ಗೆ ಮಾರುಕಟ್ಟೆ ಅಧ್ಯಯನವನ್ನು ನಡೆಸಿ, ಸ್ಥಳೀಯರ ಸಹಾಯದಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸ್ವಂತ ವ್ಯವಹಾರವನ್ನು ಪ್ರಾರಂಭಿಸಿ, ವ್ಯಾಪಾರದಲ್ಲಿ ಹೂಡಿಕೆ ಮಾಡಿದರು. ನಂಬಿಕಸ್ಥ ಜನರು ದೊಡ್ಡ ಪ್ರಮಾಣದಲ್ಲಿ ವಂಚಿಸಿದಾಗ ಧೈರ್ಯಗುಂದದೆ, ವ್ಯಾಪಾರವನ್ನು ಪುನರಾಂಭಿಸಿದರು. ಅವರ
ಪತ್ನಿ ಫ್ಲೇವಿ ಅವರ ಸಹಾಯದಿಂದ ಮುನ್ನಡೆದುದರ ಮಾತನಾಡಿದರು. ಸಭಿಕರಲ್ಲಿ ನೆರೆದಿದ್ದ ಯುವ ಉದ್ಯಮಿಗಳಿಗೆ ‘ನಿಮ್ಮ ವ್ಯವಹಾರವು ಆರ್ಥಿಕ ಪಾರದರ್ಶಕತೆಯನ್ನು ಹೊಂದಿರಬೇಕು. ಕಠಿಣ ಪರಿಶ್ರಮ, ನಿಮ್ಮ ಕೆಲಸದ ಬಗ್ಗೆ ಜ್ಞಾನ ಮತ್ತು ಹಣಕಾಸಿನ ಸರಿಯಾದ ನಿರ್ವಹಣೆ ವ್ಯವಹಾರದಲ್ಲಿ ಯಶಸ್ಸಿಗೆ ಪ್ರಮುಖವಾಗಿದೆ. ನಿಮ್ಮ ವ್ಯವಹಾರ ವಿಫಲವಾದರೂ ನಿಮ್ಮ ಹೆಸರು ಖ್ಯಾತಿಯಲ್ಲಿರಬೇಕು’ ಎಂಬ ಸಲಹೆ ನೀಡಿದರು.
ರಚನಾ ಸಂಸ್ಥೆಯ ಅಧ್ಯಕ್ಷ ವಿನ್ಸೆಂಟ್ ಕುಟಿನ್ಹಾ ಸ್ವಾಗತಿಸಿ, ಉಪಾಧ್ಯಕ್ಷ ಸಿಎ ರುಡಾಲ್ಫ್ ರೋಡ್ರಿಗಸ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಆಡಳಿತ ಮಂಡಳಿ ಸದಸ್ಯರಾದ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿ, ಕೋಶಾಧಿಕಾರಿ ಯುಲಾಲಿಯಾ ಡಿಸೋಜಾ ವಂದಿಸಿದರು. ಭೋಜನದೊಂದಿಗೆ ಸಭೆ ಮುಕ್ತಾಯವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು