4:49 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ವ್ಯವಹಾರದಲ್ಲಿನ ಅಡೆತಡೆಗಳ ನಿವಾರಣೆ: ಎನ್‌ಆರ್‌ಐ ಉದ್ಯಮಿ ಮೈಕಲ್ ಡಿಸೋಜಾರಿಂದ ವಿಚಾರ ಸಂಕಿರಣ

01/06/2023, 11:42

ಮಂಗಳೂರು(reporterkarnataka.com): ರಚನಾ, ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ವತಿಯಿಂದ ಮಂಗಳೂರು ಕ್ಲಬ್‌ನಲ್ಲಿ ೨೮ ಮೇ 28ರಂದು ಸಂಜೆ 7 ಗಂಟೆಗೆ ಸದಸ್ಯರ ಸಭೆಯನ್ನು ನಡೆಸಲಾಯಿತು.
ಎನ್‌ಆರ್‌ಐ ಉದ್ಯಮಿ ಮೈಕೆಲ್ ಡಿಸೋಜಾ ಮುಖ್ಯ ಅತಿಥಿ ಮತ್ತು ಪ್ರಮುಖ ಭಾಷಣಕಾರರಾಗಿದ್ದರು.


ಮೈಕಲ್ ಡಿಸೋಜರವರು ಪರಿಶ್ರಮದ ಶಕ್ತಿ ಮತ್ತು ವ್ಯವಹಾರದ ಮೂಲಕ ವಿಪತ್ತುಗಳನ್ನು ನಿವಾರಿಸುವ ಬಗ್ಗೆ, ಪುತ್ತೂರಿನ ಪುಟ್ಟ ಊರಿನಿಂದ ಬಂದ ತಮ್ಮ ಜೀವನ ಪಯಣದ ಬಗ್ಗೆ ಮಾತನಾಡಿದರು. ಇವರು ತಮ್ಮ ಸಣ್ಣ ವಯಸ್ಸಿನಲ್ಲಿ ತಮ್ಮ ವ್ಯಾಪಾರವನ್ನು ಪ್ರಾರಂಭಿಸಿದರು. ನಂತರ ಯುಎಇಯಲ್ಲಿನ ವ್ಯಾಪಾರ ಸಾಮರ್ಥ್ಯದ ಬಗ್ಗೆ ಮಾರುಕಟ್ಟೆ ಅಧ್ಯಯನವನ್ನು ನಡೆಸಿ, ಸ್ಥಳೀಯರ ಸಹಾಯದಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸ್ವಂತ ವ್ಯವಹಾರವನ್ನು ಪ್ರಾರಂಭಿಸಿ, ವ್ಯಾಪಾರದಲ್ಲಿ ಹೂಡಿಕೆ ಮಾಡಿದರು. ನಂಬಿಕಸ್ಥ ಜನರು ದೊಡ್ಡ ಪ್ರಮಾಣದಲ್ಲಿ ವಂಚಿಸಿದಾಗ ಧೈರ್ಯಗುಂದದೆ, ವ್ಯಾಪಾರವನ್ನು ಪುನರಾಂಭಿಸಿದರು. ಅವರ
ಪತ್ನಿ ಫ್ಲೇವಿ ಅವರ ಸಹಾಯದಿಂದ ಮುನ್ನಡೆದುದರ ಮಾತನಾಡಿದರು. ಸಭಿಕರಲ್ಲಿ ನೆರೆದಿದ್ದ ಯುವ ಉದ್ಯಮಿಗಳಿಗೆ ‘ನಿಮ್ಮ ವ್ಯವಹಾರವು ಆರ್ಥಿಕ ಪಾರದರ್ಶಕತೆಯನ್ನು ಹೊಂದಿರಬೇಕು. ಕಠಿಣ ಪರಿಶ್ರಮ, ನಿಮ್ಮ ಕೆಲಸದ ಬಗ್ಗೆ ಜ್ಞಾನ ಮತ್ತು ಹಣಕಾಸಿನ ಸರಿಯಾದ ನಿರ್ವಹಣೆ ವ್ಯವಹಾರದಲ್ಲಿ ಯಶಸ್ಸಿಗೆ ಪ್ರಮುಖವಾಗಿದೆ. ನಿಮ್ಮ ವ್ಯವಹಾರ ವಿಫಲವಾದರೂ ನಿಮ್ಮ ಹೆಸರು ಖ್ಯಾತಿಯಲ್ಲಿರಬೇಕು’ ಎಂಬ ಸಲಹೆ ನೀಡಿದರು.
ರಚನಾ ಸಂಸ್ಥೆಯ ಅಧ್ಯಕ್ಷ ವಿನ್ಸೆಂಟ್ ಕುಟಿನ್ಹಾ ಸ್ವಾಗತಿಸಿ, ಉಪಾಧ್ಯಕ್ಷ ಸಿಎ ರುಡಾಲ್ಫ್ ರೋಡ್ರಿಗಸ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಆಡಳಿತ ಮಂಡಳಿ ಸದಸ್ಯರಾದ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿ, ಕೋಶಾಧಿಕಾರಿ ಯುಲಾಲಿಯಾ ಡಿಸೋಜಾ ವಂದಿಸಿದರು. ಭೋಜನದೊಂದಿಗೆ ಸಭೆ ಮುಕ್ತಾಯವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು