1:38 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ವ್ಯವಹಾರದಲ್ಲಿನ ಅಡೆತಡೆಗಳ ನಿವಾರಣೆ: ಎನ್‌ಆರ್‌ಐ ಉದ್ಯಮಿ ಮೈಕಲ್ ಡಿಸೋಜಾರಿಂದ ವಿಚಾರ ಸಂಕಿರಣ

01/06/2023, 11:42

ಮಂಗಳೂರು(reporterkarnataka.com): ರಚನಾ, ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ವತಿಯಿಂದ ಮಂಗಳೂರು ಕ್ಲಬ್‌ನಲ್ಲಿ ೨೮ ಮೇ 28ರಂದು ಸಂಜೆ 7 ಗಂಟೆಗೆ ಸದಸ್ಯರ ಸಭೆಯನ್ನು ನಡೆಸಲಾಯಿತು.
ಎನ್‌ಆರ್‌ಐ ಉದ್ಯಮಿ ಮೈಕೆಲ್ ಡಿಸೋಜಾ ಮುಖ್ಯ ಅತಿಥಿ ಮತ್ತು ಪ್ರಮುಖ ಭಾಷಣಕಾರರಾಗಿದ್ದರು.


ಮೈಕಲ್ ಡಿಸೋಜರವರು ಪರಿಶ್ರಮದ ಶಕ್ತಿ ಮತ್ತು ವ್ಯವಹಾರದ ಮೂಲಕ ವಿಪತ್ತುಗಳನ್ನು ನಿವಾರಿಸುವ ಬಗ್ಗೆ, ಪುತ್ತೂರಿನ ಪುಟ್ಟ ಊರಿನಿಂದ ಬಂದ ತಮ್ಮ ಜೀವನ ಪಯಣದ ಬಗ್ಗೆ ಮಾತನಾಡಿದರು. ಇವರು ತಮ್ಮ ಸಣ್ಣ ವಯಸ್ಸಿನಲ್ಲಿ ತಮ್ಮ ವ್ಯಾಪಾರವನ್ನು ಪ್ರಾರಂಭಿಸಿದರು. ನಂತರ ಯುಎಇಯಲ್ಲಿನ ವ್ಯಾಪಾರ ಸಾಮರ್ಥ್ಯದ ಬಗ್ಗೆ ಮಾರುಕಟ್ಟೆ ಅಧ್ಯಯನವನ್ನು ನಡೆಸಿ, ಸ್ಥಳೀಯರ ಸಹಾಯದಿಂದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸ್ವಂತ ವ್ಯವಹಾರವನ್ನು ಪ್ರಾರಂಭಿಸಿ, ವ್ಯಾಪಾರದಲ್ಲಿ ಹೂಡಿಕೆ ಮಾಡಿದರು. ನಂಬಿಕಸ್ಥ ಜನರು ದೊಡ್ಡ ಪ್ರಮಾಣದಲ್ಲಿ ವಂಚಿಸಿದಾಗ ಧೈರ್ಯಗುಂದದೆ, ವ್ಯಾಪಾರವನ್ನು ಪುನರಾಂಭಿಸಿದರು. ಅವರ
ಪತ್ನಿ ಫ್ಲೇವಿ ಅವರ ಸಹಾಯದಿಂದ ಮುನ್ನಡೆದುದರ ಮಾತನಾಡಿದರು. ಸಭಿಕರಲ್ಲಿ ನೆರೆದಿದ್ದ ಯುವ ಉದ್ಯಮಿಗಳಿಗೆ ‘ನಿಮ್ಮ ವ್ಯವಹಾರವು ಆರ್ಥಿಕ ಪಾರದರ್ಶಕತೆಯನ್ನು ಹೊಂದಿರಬೇಕು. ಕಠಿಣ ಪರಿಶ್ರಮ, ನಿಮ್ಮ ಕೆಲಸದ ಬಗ್ಗೆ ಜ್ಞಾನ ಮತ್ತು ಹಣಕಾಸಿನ ಸರಿಯಾದ ನಿರ್ವಹಣೆ ವ್ಯವಹಾರದಲ್ಲಿ ಯಶಸ್ಸಿಗೆ ಪ್ರಮುಖವಾಗಿದೆ. ನಿಮ್ಮ ವ್ಯವಹಾರ ವಿಫಲವಾದರೂ ನಿಮ್ಮ ಹೆಸರು ಖ್ಯಾತಿಯಲ್ಲಿರಬೇಕು’ ಎಂಬ ಸಲಹೆ ನೀಡಿದರು.
ರಚನಾ ಸಂಸ್ಥೆಯ ಅಧ್ಯಕ್ಷ ವಿನ್ಸೆಂಟ್ ಕುಟಿನ್ಹಾ ಸ್ವಾಗತಿಸಿ, ಉಪಾಧ್ಯಕ್ಷ ಸಿಎ ರುಡಾಲ್ಫ್ ರೋಡ್ರಿಗಸ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಆಡಳಿತ ಮಂಡಳಿ ಸದಸ್ಯರಾದ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿ, ಕೋಶಾಧಿಕಾರಿ ಯುಲಾಲಿಯಾ ಡಿಸೋಜಾ ವಂದಿಸಿದರು. ಭೋಜನದೊಂದಿಗೆ ಸಭೆ ಮುಕ್ತಾಯವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು