9:59 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಸೇಲ್

03/04/2026, 21:59

ಬೆಂಗಳೂರು(reporterkarnataka.com): ಮಧ್ಯಪ್ರಾಚ್ಯ ಯುದ್ದ ಇಡೀ ವಿಶ್ವವನ್ನೇ ಅಲುಗಾಡಿಸುತ್ತಿದೆ. ಪೆಟ್ರೋಲ್, ಡಿಸೇಲ್ ಸಿಗದೇ ಒದ್ದಾಡುತ್ತಿರುವ ಜನ ಇವಿ ವಾಹನಗಳ ಮೊರೆ ಹೋಗಿದ್ದಾರೆ. ಇದರಿಂದ ಒಂದೇ ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ ವಾಹನಗಳು ಮಾರಾಟವಾಗಿವೆ. ಯುದ್ಧದಿಂದಾಗಿ ಒಂದೆಡೆ ಜನ ಅಡುಗೆ ಮನೆಗೆ ಸಿಲಿಂಡರ್ ಸಿಗದೇ ಒದ್ದಾಡುತ್ತಿದ್ರೇ, ಮತ್ತೊಂದೆಡೆ ಪೆಟ್ರೋಲ್, ಡಿಸೇಲ್ ಸಿಗದೇ ವಾಹನದಲ್ಲಿ ಹಿಂದೂ ಮುಂದು ನೋಡುವಂತಾಗಿದೆ. ಹೀಗಾಗಿ ರಾಜ್ಯದ ಜನ ನಿಧಾನವಾಗಿ ಎಲೆಕ್ಟ್ರಿಕ್ ವೆಹಿಕಲ್ಸ್‌ನತ್ತ ಮುಖ ಮಾಡಿದ್ದು, ಕಳೆದ ಒಂದು ತಿಂಗಳಿನಿಂದ ಇವಿ ವೆಹಿಕಲ್ಸ್‌ಗಳ ಮಾರಾಟ, ಬುಕ್ಕಿಂಗ್ ಹೆಚ್ಚಾಗಿದೆ. ಇರಾನ್-ಇಸ್ರೇಲ್-ಅಮೇರಿಕಾ ಕದನಕ್ಕೆ ಸದ್ಯಕ್ಕೆ ವಿರಾಮ ಬೀಳುತ್ತಿಲ್ಲ. ಈ ದೀರ್ಘಕಾಲದ ಯುದ್ದದ ಪರಿಣಾಮ ರಾಜ್ಯದ ಮೇಲೆ ಬಿದ್ದಿದ್ದು ಜನಸಾಮಾನ್ಯರು ತತ್ತರಿಸುವಂತಾಗಿದೆ. ಪ್ರಮುಖವಾಗಿ ಪೆಟ್ರೋಲ್, ಡಿಸೇಲ್, ಸಿಎನ್‌ಜಿಗಾಗಿ ಕಿಲೋಮೀಟರ್‌ಗಟ್ಟಲೇ ಕ್ಯೂ ಹಚ್ಚಿ ನಿಲ್ಲೋ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಜನ ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಳೆದ ಮಾರ್ಚ್ 1ರಿಂದ 31ರವರೆಗೆ 28,765 ಎಲೆಕ್ಟ್ರಿಕ್ ವಾಹನಗಳು ರೆಜಿಸ್ಟ್ರೇಷನ್ ಆಗಿದ್ದು, ನಿಧಾನವಾಗಿ ಇವಿ ವೆಹಿಕಲ್ಸ್ಗಳನ್ನು ಕೊಳ್ಳುವುವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೂಲಕ ಕಳೆದ ತಿಂಗಳವರೆಗೆ 7,56,637 ಎಲೆಕ್ಟ್ರಿಕ್ ವಾಹನಗಳು ರಾಜ್ಯದಲ್ಲಿ ಸಂಚರಿಸುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು