8:42 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ

04/08/2021, 18:42

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ್ಟಗೊಳ್ಳಬೇಕಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಕಿಡಿ ಕಾರಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 60 ವಾರ್ಡ್‌ಗಳ ಸಮಿತಿಗೆ ಸುಮಾರು 1,278 ಮಂದಿ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 600 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಹಾಗೆ ಆಯ್ಕೆ ಮಾಡಲಾದ ಸದಸ್ಯರ ಪೈಕಿ ಶೇ.90ರಷ್ಟು ಮಂದಿ ಬಿಜೆಪಿ ಸದಸ್ಯರಾಗಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ತಕ್ಷಣ ಈ ಪಟ್ಟಿಯನ್ನು ರದ್ದುಪಡಿಸಿ ರಾಜಕೀಯೇತರ ವ್ಯಕ್ತಿಗಳನ್ನು ಒಳಗೊಂಡ ವಾರ್ಡ್ ಸಮಿತಿ ರಚಿಸಬೇಕು ಎಂದು 

ಅವರು ಒತ್ತಾಯಿಸಿದರು.

ಸಮಿತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿದ್ದರೂ ಕೂಡ ಅವರನ್ನು ಕೈ ಬಿಡಬೇಕು. ಯಾವ ಕಾರಣಕ್ಕೂ ಆ ಸಮಿತಿಯಲ್ಲಿ ಯಾವುದೇ ಪಕ್ಷೀಯರು ಇರಬಾರದು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಟ್ರಸ್ಟ್ ಅನ್ನು ಈ ಸಮಿತಿಗೆ ಹೇಗೆ ಸೇರ್ಪಡೆ ಮಾಡಲಾಗಿದೆ ಎಂದು ಲೋಬೊ

ಪ್ರಶ್ನಿಸಿದರು.

ಮಾಜಿ ಶಾಸಕ ಮೊಯ್ದಿನ್ ಬಾವಾ, ಪಕ್ಷದ ಮುಖಂಡರಾದ ಜೆ.ಅಬ್ದುಲ್ ಸಲೀಂ, ಶುಭೋದಯ ಆಳ್ವ, ಮುಹಮ್ಮದ್ ಕುಂಜತ್ತಬೈಲ್, ಮಹಾಬಲ ಮಾರ್ಲ, ಸದಾಶಿವ ಶೆಟ್ಟಿ, ವಿಶ್ವಾಸ ಕುಮಾರ್ ದಾಸ್, ಟಿ.ಕೆ.ಸುಧೀರ್, ಪ್ರಕಾಶ್ ಸಾಲ್ಯಾನ್, ರಮಾನಂದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು