3:19 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ

04/08/2021, 18:42

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ್ಟಗೊಳ್ಳಬೇಕಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಕಿಡಿ ಕಾರಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 60 ವಾರ್ಡ್‌ಗಳ ಸಮಿತಿಗೆ ಸುಮಾರು 1,278 ಮಂದಿ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 600 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಹಾಗೆ ಆಯ್ಕೆ ಮಾಡಲಾದ ಸದಸ್ಯರ ಪೈಕಿ ಶೇ.90ರಷ್ಟು ಮಂದಿ ಬಿಜೆಪಿ ಸದಸ್ಯರಾಗಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ತಕ್ಷಣ ಈ ಪಟ್ಟಿಯನ್ನು ರದ್ದುಪಡಿಸಿ ರಾಜಕೀಯೇತರ ವ್ಯಕ್ತಿಗಳನ್ನು ಒಳಗೊಂಡ ವಾರ್ಡ್ ಸಮಿತಿ ರಚಿಸಬೇಕು ಎಂದು 

ಅವರು ಒತ್ತಾಯಿಸಿದರು.

ಸಮಿತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿದ್ದರೂ ಕೂಡ ಅವರನ್ನು ಕೈ ಬಿಡಬೇಕು. ಯಾವ ಕಾರಣಕ್ಕೂ ಆ ಸಮಿತಿಯಲ್ಲಿ ಯಾವುದೇ ಪಕ್ಷೀಯರು ಇರಬಾರದು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಟ್ರಸ್ಟ್ ಅನ್ನು ಈ ಸಮಿತಿಗೆ ಹೇಗೆ ಸೇರ್ಪಡೆ ಮಾಡಲಾಗಿದೆ ಎಂದು ಲೋಬೊ

ಪ್ರಶ್ನಿಸಿದರು.

ಮಾಜಿ ಶಾಸಕ ಮೊಯ್ದಿನ್ ಬಾವಾ, ಪಕ್ಷದ ಮುಖಂಡರಾದ ಜೆ.ಅಬ್ದುಲ್ ಸಲೀಂ, ಶುಭೋದಯ ಆಳ್ವ, ಮುಹಮ್ಮದ್ ಕುಂಜತ್ತಬೈಲ್, ಮಹಾಬಲ ಮಾರ್ಲ, ಸದಾಶಿವ ಶೆಟ್ಟಿ, ವಿಶ್ವಾಸ ಕುಮಾರ್ ದಾಸ್, ಟಿ.ಕೆ.ಸುಧೀರ್, ಪ್ರಕಾಶ್ ಸಾಲ್ಯಾನ್, ರಮಾನಂದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು