1:51 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ

04/08/2021, 18:42

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ್ಟಗೊಳ್ಳಬೇಕಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಕಿಡಿ ಕಾರಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 60 ವಾರ್ಡ್‌ಗಳ ಸಮಿತಿಗೆ ಸುಮಾರು 1,278 ಮಂದಿ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 600 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಹಾಗೆ ಆಯ್ಕೆ ಮಾಡಲಾದ ಸದಸ್ಯರ ಪೈಕಿ ಶೇ.90ರಷ್ಟು ಮಂದಿ ಬಿಜೆಪಿ ಸದಸ್ಯರಾಗಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ತಕ್ಷಣ ಈ ಪಟ್ಟಿಯನ್ನು ರದ್ದುಪಡಿಸಿ ರಾಜಕೀಯೇತರ ವ್ಯಕ್ತಿಗಳನ್ನು ಒಳಗೊಂಡ ವಾರ್ಡ್ ಸಮಿತಿ ರಚಿಸಬೇಕು ಎಂದು 

ಅವರು ಒತ್ತಾಯಿಸಿದರು.

ಸಮಿತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿದ್ದರೂ ಕೂಡ ಅವರನ್ನು ಕೈ ಬಿಡಬೇಕು. ಯಾವ ಕಾರಣಕ್ಕೂ ಆ ಸಮಿತಿಯಲ್ಲಿ ಯಾವುದೇ ಪಕ್ಷೀಯರು ಇರಬಾರದು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಟ್ರಸ್ಟ್ ಅನ್ನು ಈ ಸಮಿತಿಗೆ ಹೇಗೆ ಸೇರ್ಪಡೆ ಮಾಡಲಾಗಿದೆ ಎಂದು ಲೋಬೊ

ಪ್ರಶ್ನಿಸಿದರು.

ಮಾಜಿ ಶಾಸಕ ಮೊಯ್ದಿನ್ ಬಾವಾ, ಪಕ್ಷದ ಮುಖಂಡರಾದ ಜೆ.ಅಬ್ದುಲ್ ಸಲೀಂ, ಶುಭೋದಯ ಆಳ್ವ, ಮುಹಮ್ಮದ್ ಕುಂಜತ್ತಬೈಲ್, ಮಹಾಬಲ ಮಾರ್ಲ, ಸದಾಶಿವ ಶೆಟ್ಟಿ, ವಿಶ್ವಾಸ ಕುಮಾರ್ ದಾಸ್, ಟಿ.ಕೆ.ಸುಧೀರ್, ಪ್ರಕಾಶ್ ಸಾಲ್ಯಾನ್, ರಮಾನಂದ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು