9:23 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ ಆಗಲಿದೆ ಕಣ್ಣೀರ ಕತೆ

31/07/2025, 18:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterarnataka@gmail.com

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಘಟನೆಯೊಂದು ಕೇರಳದಲ್ಲಿ ಸಿನಿಮಾ ಆಗಿ ರೂಪ ಪಡೆಯಲಿದೆ. ನಿಜ ಘಟನೆಗಳನ್ನು ಸಿನಿಮಾ ಮಾಡುವಲ್ಲಿ ಪರಿಣಿತರಾಗಿರುವ ಮಲಯಾಳಿ ಚಿತ್ರರಂಗದವರು ಕಳೆದ ವರ್ಷ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಮಾದವನ್ನು ಸಿನಿಮಾ ಮಾಡಲಿದ್ದಾರೆ. ಸಿನಿಮಾಕ್ಕೆ ಕತೆ ಬರೆಯಲಿರುವುದು ಕೇರಳದ ಶಾಸಕ ಎಕೆಎಂ ಅಶ್ರಫ್. ಕಳೆದ ವರ್ಷ ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಆ ಘಟನೆಯಲ್ಲಿ ಬರೋಬ್ಬರಿ 11 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಇಬ್ಬರ ಶವ ಈ ವರೆಗೆ ಸಿಕ್ಕಿಲ್ಲ. ಮೃತಪಟ್ಟವರಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಸಹ ಇದ್ದರು. ಆದರೆ ಅರ್ಜುನ್ ಮೃತದೇಹ ಸಿಗದೇ ಇದ್ದ ಕಾರಣ ಆತ ಬದುಕಿದ್ದಾನೆಂದು ನಂಬಲಾಗಿತ್ತು. ಕೇರಳದಲ್ಲಿ ಅರ್ಜುನ್ ಬದುಕಿ ಬರಲೆಂದು ಲಕ್ಷಾಂತರ ಮಂದಿ ಪ್ರಾರ್ಥಿಸಿದ್ದರು. ಸಾಮೂಹಿಕ ಪ್ರಾರ್ಥನೆಗಳನ್ನು ಸಹ ನಡೆಸಿದ್ದರು. ಆದರೆ ಸತತ ಕಾರ್ಯಾಚರಣೆ ಬಳಿಕವೂ ಸಹ ಅರ್ಜುನ್ ಬದುಕಲಿಲ್ಲ. ಬರೋಬ್ಬರಿ ಮೂರು ತಿಂಗಳ ಬಳಿಕ ಅರ್ಜುನ್ ಮೃತದೇಹ ಪತ್ತೆ ಆಯ್ತು. ಅರ್ಜುನ್ ಹುಡುಕಾಟದ ಕಾರ್ಯಾಚರಣೆ ವೇಲೆ ಶಾಸಕ ಅಶ್ರಫ್ ಸ್ಥಳದಲ್ಲಿಯೇ ಹಾಜರಿದ್ದರು. ಎಲ್ಲ ಕಾರ್ಯಾಚರಣೆಗಳನ್ನು ಅವರು ಹತ್ತಿರದಿಂದ ಗಮನಿಸಿದರು. ಇದೀಗ ಅಶ್ರಫ್ ಅವರು ತಮ್ಮ ಆ ಅನುಭವವನ್ನು ಆಧರಿಸಿ ಶಿರೂರು ಗುಡ್ಡ ಕುಸಿತದ ಬಗ್ಗೆ ಕತೆ ಬರೆಯಲಿದ್ದಾರೆ. ಆ ಕಥೆಯೇ ಸಿನಿಮಾ ಸಹ ಆಗಲಿದೆ. ಕೋಯಿಕೋಡಿನ ಅರ್ಜುನ್ ಶವ ಹೊರತೆಗೆಯುವ ಕಾರ್ಯಾಚರಣೆ ಬಲು ರೋಚಕವಾಗಿತ್ತು. ಆ ರೋಚಕತೆ ಮತ್ತು ಅವರ ಕುಟುಂಬದ ಭಾವುಕತೆ, ಕೇರಳದ ಜನರು ಅರ್ಜುನ್​ಗಾಗಿ ಮರುಗಿದ್ದು ಎಲ್ಲವೂ ಸಿನಿಮಾಕ್ಕೆ ವಸ್ತುವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು