2:50 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ ಆಗಲಿದೆ ಕಣ್ಣೀರ ಕತೆ

31/07/2025, 18:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterarnataka@gmail.com

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಘಟನೆಯೊಂದು ಕೇರಳದಲ್ಲಿ ಸಿನಿಮಾ ಆಗಿ ರೂಪ ಪಡೆಯಲಿದೆ. ನಿಜ ಘಟನೆಗಳನ್ನು ಸಿನಿಮಾ ಮಾಡುವಲ್ಲಿ ಪರಿಣಿತರಾಗಿರುವ ಮಲಯಾಳಿ ಚಿತ್ರರಂಗದವರು ಕಳೆದ ವರ್ಷ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಮಾದವನ್ನು ಸಿನಿಮಾ ಮಾಡಲಿದ್ದಾರೆ. ಸಿನಿಮಾಕ್ಕೆ ಕತೆ ಬರೆಯಲಿರುವುದು ಕೇರಳದ ಶಾಸಕ ಎಕೆಎಂ ಅಶ್ರಫ್. ಕಳೆದ ವರ್ಷ ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಆ ಘಟನೆಯಲ್ಲಿ ಬರೋಬ್ಬರಿ 11 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಇಬ್ಬರ ಶವ ಈ ವರೆಗೆ ಸಿಕ್ಕಿಲ್ಲ. ಮೃತಪಟ್ಟವರಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಸಹ ಇದ್ದರು. ಆದರೆ ಅರ್ಜುನ್ ಮೃತದೇಹ ಸಿಗದೇ ಇದ್ದ ಕಾರಣ ಆತ ಬದುಕಿದ್ದಾನೆಂದು ನಂಬಲಾಗಿತ್ತು. ಕೇರಳದಲ್ಲಿ ಅರ್ಜುನ್ ಬದುಕಿ ಬರಲೆಂದು ಲಕ್ಷಾಂತರ ಮಂದಿ ಪ್ರಾರ್ಥಿಸಿದ್ದರು. ಸಾಮೂಹಿಕ ಪ್ರಾರ್ಥನೆಗಳನ್ನು ಸಹ ನಡೆಸಿದ್ದರು. ಆದರೆ ಸತತ ಕಾರ್ಯಾಚರಣೆ ಬಳಿಕವೂ ಸಹ ಅರ್ಜುನ್ ಬದುಕಲಿಲ್ಲ. ಬರೋಬ್ಬರಿ ಮೂರು ತಿಂಗಳ ಬಳಿಕ ಅರ್ಜುನ್ ಮೃತದೇಹ ಪತ್ತೆ ಆಯ್ತು. ಅರ್ಜುನ್ ಹುಡುಕಾಟದ ಕಾರ್ಯಾಚರಣೆ ವೇಲೆ ಶಾಸಕ ಅಶ್ರಫ್ ಸ್ಥಳದಲ್ಲಿಯೇ ಹಾಜರಿದ್ದರು. ಎಲ್ಲ ಕಾರ್ಯಾಚರಣೆಗಳನ್ನು ಅವರು ಹತ್ತಿರದಿಂದ ಗಮನಿಸಿದರು. ಇದೀಗ ಅಶ್ರಫ್ ಅವರು ತಮ್ಮ ಆ ಅನುಭವವನ್ನು ಆಧರಿಸಿ ಶಿರೂರು ಗುಡ್ಡ ಕುಸಿತದ ಬಗ್ಗೆ ಕತೆ ಬರೆಯಲಿದ್ದಾರೆ. ಆ ಕಥೆಯೇ ಸಿನಿಮಾ ಸಹ ಆಗಲಿದೆ. ಕೋಯಿಕೋಡಿನ ಅರ್ಜುನ್ ಶವ ಹೊರತೆಗೆಯುವ ಕಾರ್ಯಾಚರಣೆ ಬಲು ರೋಚಕವಾಗಿತ್ತು. ಆ ರೋಚಕತೆ ಮತ್ತು ಅವರ ಕುಟುಂಬದ ಭಾವುಕತೆ, ಕೇರಳದ ಜನರು ಅರ್ಜುನ್​ಗಾಗಿ ಮರುಗಿದ್ದು ಎಲ್ಲವೂ ಸಿನಿಮಾಕ್ಕೆ ವಸ್ತುವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು