9:42 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Water | ನಾರಾಯಣಪುರ ಕಾಲುವೆಗೆ ಏ.15ರವರೆಗೆ ನೀರು ಹರಿಸಲು ರೈತ ಸಂಘ ಮುಖಂಡರು ಒತ್ತಾಯ

02/03/2025, 16:45

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘ ಹುಣಸಗಿ ತಾಲೂಕು ಘಟಕದ ಪದಾಧಿಕಾರಿಗಳು ಶನಿವಾರ ಕೆಬಿಜೆಎನ್‌ಎಲ್ ಮುಖ್ಯ ಎಂಜಿನಿಯರ ಕಚೇರಿಗೆ ತೆರಳಿ ಹಿಂಗಾರು ಹಂಗಾಮಿನ ಬೆಳೆಗಳಿಗೆ ಏ.15ರವರೆಗೆ
ನಾರಾಯಣಪುರ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸಿಇ ಆರ್. ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.
ರೈತ ಮುಖಂಡ ಹನುಮಗೌಡ ನಾರಾಯಣಪುರ, ಸಂಘಟನೆ ತಾಲೂಕು ಉಪಾಧ್ಯಕ್ಷ ಗದ್ದೆಪ್ಪನಾಗಬೇನಾಳ ಮಾತನಾಡಿ, ಕೃಷ್ಣಾ ಅಚ್ಚುಕಟ್ಟು ಭಾಗದ ರೈತರು ಕಾಲುವೆ ನೀರನ್ನೇ ನಂಬಿ ವಿವಿಧ ಬೆಳೆ ಬೆಳೆದಿದ್ದಾರೆ. ಪ್ರಸ್ತುತ ಬೆಳೆಗಳು ಸಮೃದ್ದವಾಗಿ ಬೆಳೆಯಲು ಮುಂದಿನ ಎರಡು ತಿಂಗಳವರೆಗೆ ನೀರಿನ ಅವಶ್ಯಕತೆ ಇದೆ. ಆಗ ಮಾತ್ರ ಬೆಳೆಗಳು ರೈತರ ಕೈಸೇರುತ್ತವೆ. ಇದನ್ನು ನೀರಾವರಿ ಅಧಿಕಾರಿಗಳು ಮನಗಂಡು ಏ.15ರವರೆಗೆ ಎಡ ಹಾಗೂ ಬಲದಂಡೆ ಮುಖ್ಯ ಕಾಲುವೆಗಳಿಗೆ ನೀರು ಹರಿಸಬೇಕು ಎಂದರು.
ನಿಗಮದ ಅಡಿಯಲ್ಲಿ ಈ ಹಿಂದೆ ಬಾಕಿ ಉಳಿದ ಕಾಮಗಾರಿ ಶೀಘ್ರವೇ ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ಮನವಿಯಲ್ಲಿ ವಿವರಿಸಲಾಗಿದೆ ಎಂದರು.

ಸಿಇ ಆರ್. ಮಂಜುನಾಥ ಮನವಿ ಸ್ವೀಕರಿಸಿ ಮಾತನಾಡಿ, ಮನವಿಯನ್ನು ಸರ್ಕಾರ, ಎಂಡಿ ಹಾಗೂ ಐಸಿಸಿ ಸಭೆಗೆ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಅಧೀಕ್ಷಕ ಅಭಿಯಂತರ ಆರ್.ಜಿ. ರಾಠೋಡ, ಸಂಘಟನೆ ಜಿಲ್ಲಾ ಉಪಾಧ್ಯಕ್ಷ ತಿಪ್ಪಣ್ಣ ಜಂಪಾ, ನಿಂಗನಗೌಡ ಗುಳಬಾಳ, ಮೈಬೂಬ ಅಂಗಡಿ ಸೇರಿದಂತೆ ಗುಳಬಾಳ, ಕಕ್ಕೇರಾ, ನಾರಾಯಣಪುರ, ಮೇಲಿನಗಡ್ಡಿ, ದೇವರಗಡ್ಡಿ ಗ್ರಾಮಗಳ ರೈತರು, ರೈತ ಸಂಘದ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು