5:27 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Water | ನಾರಾಯಣಪುರ ಕಾಲುವೆಗೆ ಏ.15ರವರೆಗೆ ನೀರು ಹರಿಸಲು ರೈತ ಸಂಘ ಮುಖಂಡರು ಒತ್ತಾಯ

02/03/2025, 16:45

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘ ಹುಣಸಗಿ ತಾಲೂಕು ಘಟಕದ ಪದಾಧಿಕಾರಿಗಳು ಶನಿವಾರ ಕೆಬಿಜೆಎನ್‌ಎಲ್ ಮುಖ್ಯ ಎಂಜಿನಿಯರ ಕಚೇರಿಗೆ ತೆರಳಿ ಹಿಂಗಾರು ಹಂಗಾಮಿನ ಬೆಳೆಗಳಿಗೆ ಏ.15ರವರೆಗೆ
ನಾರಾಯಣಪುರ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸಿಇ ಆರ್. ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.
ರೈತ ಮುಖಂಡ ಹನುಮಗೌಡ ನಾರಾಯಣಪುರ, ಸಂಘಟನೆ ತಾಲೂಕು ಉಪಾಧ್ಯಕ್ಷ ಗದ್ದೆಪ್ಪನಾಗಬೇನಾಳ ಮಾತನಾಡಿ, ಕೃಷ್ಣಾ ಅಚ್ಚುಕಟ್ಟು ಭಾಗದ ರೈತರು ಕಾಲುವೆ ನೀರನ್ನೇ ನಂಬಿ ವಿವಿಧ ಬೆಳೆ ಬೆಳೆದಿದ್ದಾರೆ. ಪ್ರಸ್ತುತ ಬೆಳೆಗಳು ಸಮೃದ್ದವಾಗಿ ಬೆಳೆಯಲು ಮುಂದಿನ ಎರಡು ತಿಂಗಳವರೆಗೆ ನೀರಿನ ಅವಶ್ಯಕತೆ ಇದೆ. ಆಗ ಮಾತ್ರ ಬೆಳೆಗಳು ರೈತರ ಕೈಸೇರುತ್ತವೆ. ಇದನ್ನು ನೀರಾವರಿ ಅಧಿಕಾರಿಗಳು ಮನಗಂಡು ಏ.15ರವರೆಗೆ ಎಡ ಹಾಗೂ ಬಲದಂಡೆ ಮುಖ್ಯ ಕಾಲುವೆಗಳಿಗೆ ನೀರು ಹರಿಸಬೇಕು ಎಂದರು.
ನಿಗಮದ ಅಡಿಯಲ್ಲಿ ಈ ಹಿಂದೆ ಬಾಕಿ ಉಳಿದ ಕಾಮಗಾರಿ ಶೀಘ್ರವೇ ಕೈಗೆತ್ತಿಕೊಂಡು ಪೂರ್ಣಗೊಳಿಸುವಂತೆ ಮನವಿಯಲ್ಲಿ ವಿವರಿಸಲಾಗಿದೆ ಎಂದರು.

ಸಿಇ ಆರ್. ಮಂಜುನಾಥ ಮನವಿ ಸ್ವೀಕರಿಸಿ ಮಾತನಾಡಿ, ಮನವಿಯನ್ನು ಸರ್ಕಾರ, ಎಂಡಿ ಹಾಗೂ ಐಸಿಸಿ ಸಭೆಗೆ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಅಧೀಕ್ಷಕ ಅಭಿಯಂತರ ಆರ್.ಜಿ. ರಾಠೋಡ, ಸಂಘಟನೆ ಜಿಲ್ಲಾ ಉಪಾಧ್ಯಕ್ಷ ತಿಪ್ಪಣ್ಣ ಜಂಪಾ, ನಿಂಗನಗೌಡ ಗುಳಬಾಳ, ಮೈಬೂಬ ಅಂಗಡಿ ಸೇರಿದಂತೆ ಗುಳಬಾಳ, ಕಕ್ಕೇರಾ, ನಾರಾಯಣಪುರ, ಮೇಲಿನಗಡ್ಡಿ, ದೇವರಗಡ್ಡಿ ಗ್ರಾಮಗಳ ರೈತರು, ರೈತ ಸಂಘದ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು