2:49 PM Wednesday22 - April 2026
ಬ್ರೇಕಿಂಗ್ ನ್ಯೂಸ್
ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ…

ಇತ್ತೀಚಿನ ಸುದ್ದಿ

ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 8ರಿಂದ 120 ದಿನಗಳವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ

02/07/2025, 10:43

ಬೆಂಗಳೂರು(reporterkarnataka.com): ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್. ಬಿ. ತಿಮ್ಮಾಪೂರ ಅವರು ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸಚಿವ ಆರ್ ಬಿ ತಿಮ್ಮಾಪೂರ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ 2025-26 ನೇ ಸಾಲಿನ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಯಿತು.


ಆಲಮಟ್ಟಿ ಮತ್ತು ನಾರಾಯಣಪುರ ಡ್ಯಾಂಗಳಲ್ಲಿ 80.58 ನೀರು ಸಂಗ್ರಹವಾಗಿದ್ದು, ಕಳೆದ ಸಾಲಿಗಿಂತ 54.77 ಟಿಎಂಸಿ ಹೆಚ್ಚುವರಿ ನೀರು ಸಂಗ್ರಹವಾಗಿದೆ. ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶವು ಮುಂಗಾರು ಹಂಗಾಮಿನ ಮಳೆ ಆಧರಿತವಾಗಿದ್ದು, ಮಳೆಯನ್ನು ಆಧರಿಸಿ ಅವಶ್ಯಕತೆಗೆ ತಕ್ಕಂತೆ ನೀರು ಹರಿಸಲು ಸಚಿವರು ಸೂಚಿಸಿದರು.
ಜುಲೈ 8ರಿಂದ ಮುಂದಿನ 120 ದಿನಗಳಿಗೆ‌ ಮುಂಗಾರು ಹಂಗಾಮಿಗೆ ನೀರು ಪೂರೈಸಲು ತೀರ್ಮಾನಿಸಲಾಗಿದೆ. ಒಳಹರಿವು ಆಧರಿಸಿ ಕಾಲುವೆಗಳಿಗೆ ಸತತವಾಗಿ ನೀರು ಬಿಡಲು ಸಚಿವ ತಿಮ್ಮಾಪೂರ ಅವರು ಅಧಿಕಾರಿಗಳಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು