9:23 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ ಕೆಲಸಕ್ಕೆ ಸಾರ್ವಜನಿಕರ ಹಿಡಿ ಶಾಪ!

08/07/2025, 13:02

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತೀರ್ಥಹಳ್ಳಿ- ಕೊಪ್ಪ ರಸ್ತೆ ಸಂಪರ್ಕಿಸುವ ತುಂಗಾ ಕಮಾನು ಸೇತುವೆ ಮೇಲೆ ಮಳೆ ಬರುವ ವೇಳೆ ಎರಡು ಅಡಿ ನೀರು ಹರಿಯುತ್ತಿದ್ದು ಇದರಿಂದ ಸೇತುವೆ ಮೇಲೆ ಓಡಾಟ ಮಾಡುವವರಿಗೆ ಮಳೆಯ ಸ್ನಾನದ ಜೊತೆಗೆ ಕೊಳಚೆ ನೀರಿನ ಸ್ನಾನ ಕೂಡ ಆಗುತ್ತಿದೆ.

ಪ್ರವಾಸಿ ಮಂದಿರದಿಂದ ಹರಿದು ಬರುವ ನೀರು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಇಲ್ಲಿ ಸಣ್ಣ ಮಳೆ ಬಂದರೂ ನೀರು ರಸ್ತೆಯ ಮೇಲೆ ಹರಿದು ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ತ್ಯಾಜ್ಯ, ಕೊಳಕು ನೀರು ರಸ್ತೆಯ
ಮೇಲೆ ಹರಿಯುತ್ತಿದ್ದು, ನಡೆದಾಡಲು ಕಷ್ಟಪಡುವಂತಾಗಿದೆ. ಇಲ್ಲಿ ಪಾದಚಾರಿಗಳಿಗೆ ವಾಹನಗಳಿಂದ ಕೊಳಕು ನೀರಿನ ಅಭಿಷೇಕ ಮಾಮೂಲಿ ಎಂಬಂತೆ ಆಗಿದೆ.
ತತ್‌ಕ್ಷಣ ಇಲ್ಲಿ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ರಸ್ತೆಯಿಂದ ಹರಿದು ಬರುವ ನೀರು ಸೇತುವೆ ಮೇಲೆ ನಿಲ್ಲದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು