11:49 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ ಕೆಲಸಕ್ಕೆ ಸಾರ್ವಜನಿಕರ ಹಿಡಿ ಶಾಪ!

08/07/2025, 13:02

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತೀರ್ಥಹಳ್ಳಿ- ಕೊಪ್ಪ ರಸ್ತೆ ಸಂಪರ್ಕಿಸುವ ತುಂಗಾ ಕಮಾನು ಸೇತುವೆ ಮೇಲೆ ಮಳೆ ಬರುವ ವೇಳೆ ಎರಡು ಅಡಿ ನೀರು ಹರಿಯುತ್ತಿದ್ದು ಇದರಿಂದ ಸೇತುವೆ ಮೇಲೆ ಓಡಾಟ ಮಾಡುವವರಿಗೆ ಮಳೆಯ ಸ್ನಾನದ ಜೊತೆಗೆ ಕೊಳಚೆ ನೀರಿನ ಸ್ನಾನ ಕೂಡ ಆಗುತ್ತಿದೆ.

ಪ್ರವಾಸಿ ಮಂದಿರದಿಂದ ಹರಿದು ಬರುವ ನೀರು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಇಲ್ಲಿ ಸಣ್ಣ ಮಳೆ ಬಂದರೂ ನೀರು ರಸ್ತೆಯ ಮೇಲೆ ಹರಿದು ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ತ್ಯಾಜ್ಯ, ಕೊಳಕು ನೀರು ರಸ್ತೆಯ
ಮೇಲೆ ಹರಿಯುತ್ತಿದ್ದು, ನಡೆದಾಡಲು ಕಷ್ಟಪಡುವಂತಾಗಿದೆ. ಇಲ್ಲಿ ಪಾದಚಾರಿಗಳಿಗೆ ವಾಹನಗಳಿಂದ ಕೊಳಕು ನೀರಿನ ಅಭಿಷೇಕ ಮಾಮೂಲಿ ಎಂಬಂತೆ ಆಗಿದೆ.
ತತ್‌ಕ್ಷಣ ಇಲ್ಲಿ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ರಸ್ತೆಯಿಂದ ಹರಿದು ಬರುವ ನೀರು ಸೇತುವೆ ಮೇಲೆ ನಿಲ್ಲದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು