6:04 PM Sunday12 - April 2026
ಬ್ರೇಕಿಂಗ್ ನ್ಯೂಸ್
ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ…

ಇತ್ತೀಚಿನ ಸುದ್ದಿ

ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ ಕೆಲಸಕ್ಕೆ ಸಾರ್ವಜನಿಕರ ಹಿಡಿ ಶಾಪ!

08/07/2025, 13:02

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತೀರ್ಥಹಳ್ಳಿ- ಕೊಪ್ಪ ರಸ್ತೆ ಸಂಪರ್ಕಿಸುವ ತುಂಗಾ ಕಮಾನು ಸೇತುವೆ ಮೇಲೆ ಮಳೆ ಬರುವ ವೇಳೆ ಎರಡು ಅಡಿ ನೀರು ಹರಿಯುತ್ತಿದ್ದು ಇದರಿಂದ ಸೇತುವೆ ಮೇಲೆ ಓಡಾಟ ಮಾಡುವವರಿಗೆ ಮಳೆಯ ಸ್ನಾನದ ಜೊತೆಗೆ ಕೊಳಚೆ ನೀರಿನ ಸ್ನಾನ ಕೂಡ ಆಗುತ್ತಿದೆ.

ಪ್ರವಾಸಿ ಮಂದಿರದಿಂದ ಹರಿದು ಬರುವ ನೀರು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಇಲ್ಲಿ ಸಣ್ಣ ಮಳೆ ಬಂದರೂ ನೀರು ರಸ್ತೆಯ ಮೇಲೆ ಹರಿದು ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ತ್ಯಾಜ್ಯ, ಕೊಳಕು ನೀರು ರಸ್ತೆಯ
ಮೇಲೆ ಹರಿಯುತ್ತಿದ್ದು, ನಡೆದಾಡಲು ಕಷ್ಟಪಡುವಂತಾಗಿದೆ. ಇಲ್ಲಿ ಪಾದಚಾರಿಗಳಿಗೆ ವಾಹನಗಳಿಂದ ಕೊಳಕು ನೀರಿನ ಅಭಿಷೇಕ ಮಾಮೂಲಿ ಎಂಬಂತೆ ಆಗಿದೆ.
ತತ್‌ಕ್ಷಣ ಇಲ್ಲಿ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ರಸ್ತೆಯಿಂದ ಹರಿದು ಬರುವ ನೀರು ಸೇತುವೆ ಮೇಲೆ ನಿಲ್ಲದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು