1:33 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ

23/04/2025, 20:01

ಮಂಗಳೂರು(reporterkarnataka.com): ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮೋದನೆ
ನೀಡಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿಯಲ್ಲಿ ನಡೆದ ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಒಪ್ಪಿಗೆ ನೀಡಿದರು.
*ಮುಖ್ಯಾಂಶಗಳು:*

* ರಾಜ್ಯದ ಬಂದರುಗಳು ಅಭಿವೃದ್ಧಿ, ಜಲಸಾರಿಗೆ ಯೋಜನೆಗಳ ಪ್ರಗತಿ, ಸರಕು ಸಾಗಣೆಗೆ ಅವಶ್ಯವಿರುವ ಮೂಲ ಸೌಲಭ್ಯಗಳ ಬಗ್ಗೆ ಸಮಿತಿಯಲ್ಲಿ ಚರ್ಚಿಸಲಾಯಿತು.

* ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್  ಮೆಟ್ರೋ ಯೋಜನೆ  ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದರು.

* ಸಾಗರಮಾಲಾ ಯೋಜನೆಯಡಿಯಲ್ಲಿ  ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದರು.

* ಪುನರ್ವಸತಿ, ಬಂದರು ಸಂಬಂಧಿತ ಕಾರ್ಯಾಚರಣೆಗಳಿಗೆ ಭೂಮಿ ಹಂಚಿಕೆ ಗುತ್ತಿಗೆ ಅವಧಿಯನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದು ಜತೆಗೆ ಅತಿಕ್ರಮಣ ಮಾಡಿಕೊಂಡಿರುವವರನ್ನು ಕೂಡಲೇ ಎತ್ತಂಗಡಿ ಮಾಡುವಂತೆ ಸಿಎಂ ಸೂಚಿಸಿದರು.

* ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಡ್ರೋಣ್ ಸರ್ವೇ ಮಾಡಿಸಿ
ಇನ್ನು ಮೂರು ತಿಂಗಳ ಒಳಗಾಗಿ ವರದಿ ನೀಡುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

* ಆಂಧ್ರ ಪ್ರದೇಶ, ವಿಶಾಖಪಟ್ಟಣ, ಕೇರಳ, ತಮಿಳು ನಾಡು, ಗುಜರಾತ್ ಗಳಲ್ಲಿ ಬಂದರುಗಳು ಹೇಗೆ ಕಾರ್ಯನಿರ್ವ ಹಿಸುತ್ತಿವೆ ಎಂಬುದರ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ
ಸೂಚನೆ ನೀಡಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಬಂದರು ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ, ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು