7:01 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ನೀರು, ಮಣ್ಣು ದೇವರು ಕೊಟ್ಟ ಕಾಣಿಕೆ ಅದು ಸಂರಕ್ಷಣೆ ಮಾಡಬೇಕು: ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮೀಜಿ

22/02/2025, 19:22

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ರೈತರು ಮಣ್ಣು,ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದ್ದು, ಮನೆಗೊಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಯಲ್ಲಿ ಪ್ರತಿಯೊಬ್ಬರು ಪಾಲದಾರರಾಗಬೇಕು ಎಂದು ಅಬ್ಬೆ ತುಮಕೂರಿನ ಶ್ರೀ ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮಿಗಳಾದ ಶಿವಶೇಖರ ಸ್ವಾಮಿ ಹೇಳಿದರು
ತಾಲೂಕಿನ ಅಬ್ಬೆತುಮಕೂರ ಗ್ರಾಮದ ಶ್ರೀ ವಿಶ್ವರಾಧ್ಯ ಸಿದ್ದ ಸಂಸ್ಥಾನ ಮಠದಲ್ಲಿ ಜಿಲ್ಲಾ ಪಂಚಾಯತ್ ಯಾದಗಿರಿ, ಕೃಷಿ ಇಲಾಖೆ ಯಾದಗಿರಿ ವತಿಯಿಂದ ಪ್ರದಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ, ಜಲಾನಯನ ಯಾತ್ರೆ ಪ್ರಯುಕ್ತ ಪಾನಿ ಕೀ ಪಾಠ ಶಾಲಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೇಸಿಗೆ ಆರಂಭವಾಗಿದ್ದು, ನೀರನ್ನು ಮಿತವಾಗಿ ಬಳಸಬೇಕು. ಮಾನವ ಹಾಗೂ ಪ್ರಾಣಿ-ಪಕ್ಷಿ ಸಂಕುಲ ಆಹಾರವಿಲ್ಲದೆ ಹಲವಾರು ದಿನಗಳು ಬದುಕಬಹುದು. ಆದರೆ ಕುಡಿಯುವ ನೀರಿಲ್ಲದೆ ಒಂದು ದಿನಬದುಕುವುದೂ ಅತೀ ಕಷ್ಟ ಎಂದರು.
ಮಳೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದ ನೀರಿನ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ನೀರನ್ನು ಪೋಲು ಮಾಡದೆ ಎಚ್ಚರಿಕೆಯಿಂದ ಬಳಸಬೇಕು ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸುರೇಶ ಮಾತನಾಡಿ, ನೀರನ್ನು ಮಿತವಾಗಿ ಬಳಸಬೇಕು. ನೀರಿನ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ. ನಾವೆಲ್ಲರೂ ಸಂಶೋಧನೆಗಳಿಂದ ಎಷ್ಟೇ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಮುಂದುವರಿದರೂ, ನಮ್ಮಿಂದ ನೀರನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ನೀರು ದೇವರು ಕೊಟ್ಟ ಕಾಣಿಕೆ. ಅದನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕೆಂದರೆ ನೀರನ್ನು ಸಂರಕ್ಷಿಸಬೇಕು ಎಂದರು.
ಈ‌ ಸಂದರ್ಭದಲ್ಲಿ ಸಹಾಯಕ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳಾದ ಯಾಮ ರೆಡ್ಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರುಗಳಾದ ಬಸವರಾಜ ಬೊಮ್ಮನ, ಟಾಟಾ ಟ್ರಸ್ಟ್ ಕಾರ್ಯಕ್ರಮ ಸಂಯೋಜಕ ಮಂಜುನಾಥ, ಅಬ್ಬೆತುಕೂರಿನ ಪಶು ವೈದ್ಯಾಧಿಕಾರಿ ಡಾ. ಶಿವಮಂಗಲಾ, ತೋಟಗಾರಿಕೆ ವಿಸ್ತಾರಣ ಮುಂದಾಳು ರಾಜಕುಮಾರ, ಸಹಾಯಕ ಕೃಷಿ ನಿರ್ದೇಶಕರು ವಿಷಯ ತಜ್ಷರಾದ ರಾಜಕುಮಾರ, ಅಬ್ಬೆಮಕೂರಿನ ಬಿಎಡ್ ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು