6:11 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ: ಕಾಫಿನಾಡು ಚಿಕ್ಕಮಗಳೂರು ಸ್ತಬ್ಧ; ರಸ್ತೆಗಳೆಲ್ಲ ಖಾಲಿ ಖಾಲಿ 

08/01/2022, 15:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಇಂದು ಬಹುತೇಕ ಸ್ತಬ್ಧವಾಗಿದೆ. ಸದಾ ಜನ ಮತ್ತು ವಾಹನಗಳಿಂದ ಗಿಜಿಗುಡುತ್ತಿದ್ದ ಮಹಾತ್ಮಗಾಂಧಿ ರಸ್ತೆ, ಮಾರ್ಕೆಟ್ ರಸ್ತೆ,  ಐಜಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಹೊಡೆಯುತ್ತಿದ್ದವು.

ರಸ್ತೆ ಸಾರಿಗೆ ಬಸ್ ಸಂಚಾರ ಇದ್ದರೂ ಪ್ರಯಾಣಿಕರಿಲ್ಲದೆ ಖಾಲಿ ಹೊಡೆಯುತ್ತಿದ್ದವು . 

ಕರ್ಫ್ಯೂ  ಮಧ್ಯೆ ಕೆಲಸವಿಲ್ಲದೆ ಓಡಾಡುತ್ತಿದ್ದ ಹಲವರು ಪೊಲೀಸರ ಕೈಗೆ ಸಿಕ್ಕಿಬಿದ್ದು ದಂಡ ತೆರಬೇಕಾಯಿತು .

ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಎಲ್ಲೆಡೆ ಪೊಲೀಸ್ ಕಣ್ಗಾವಲು ಇರಿಸಲಾಗಿತ್ತು .

2 ನೇ ಶನಿವಾರವಾಗಿದ್ದರಿಂದ ಸಹಜವಾಗಿ ಸರ್ಕಾರಿ ಕಚೇರಿ, ಬ್ಯಾಂಕ್ ಗೆ ರಜೆ ಇತ್ತು. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ತುರ್ತು ಸೇವೆಗಳಿಗೆ ಬೆರಳೆಣಿಕೆಯಷ್ಟು  ಜನ ತಿರುಗಾಡುತ್ತಿದ್ದು  ಪೊಲೀಸರಿಗೆ ಸೂಕ್ತ ಸಮಜಾಯಿಸಿ ನೀಡಬೇಕಾಗಿತ್ತು . ಹಣ್ಣು ತರಕಾರಿ ಇನ್ನಿತರ ಕೆಲ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿದ್ದರೂ ಖರೀದಿಸುವವರ ಸಂಖ್ಯೆ ವಿರಳವಾಗಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು