1:49 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ: ಕಾಫಿನಾಡು ಚಿಕ್ಕಮಗಳೂರು ಸ್ತಬ್ಧ; ರಸ್ತೆಗಳೆಲ್ಲ ಖಾಲಿ ಖಾಲಿ 

08/01/2022, 15:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಇಂದು ಬಹುತೇಕ ಸ್ತಬ್ಧವಾಗಿದೆ. ಸದಾ ಜನ ಮತ್ತು ವಾಹನಗಳಿಂದ ಗಿಜಿಗುಡುತ್ತಿದ್ದ ಮಹಾತ್ಮಗಾಂಧಿ ರಸ್ತೆ, ಮಾರ್ಕೆಟ್ ರಸ್ತೆ,  ಐಜಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಹೊಡೆಯುತ್ತಿದ್ದವು.

ರಸ್ತೆ ಸಾರಿಗೆ ಬಸ್ ಸಂಚಾರ ಇದ್ದರೂ ಪ್ರಯಾಣಿಕರಿಲ್ಲದೆ ಖಾಲಿ ಹೊಡೆಯುತ್ತಿದ್ದವು . 

ಕರ್ಫ್ಯೂ  ಮಧ್ಯೆ ಕೆಲಸವಿಲ್ಲದೆ ಓಡಾಡುತ್ತಿದ್ದ ಹಲವರು ಪೊಲೀಸರ ಕೈಗೆ ಸಿಕ್ಕಿಬಿದ್ದು ದಂಡ ತೆರಬೇಕಾಯಿತು .

ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು. ಎಲ್ಲೆಡೆ ಪೊಲೀಸ್ ಕಣ್ಗಾವಲು ಇರಿಸಲಾಗಿತ್ತು .

2 ನೇ ಶನಿವಾರವಾಗಿದ್ದರಿಂದ ಸಹಜವಾಗಿ ಸರ್ಕಾರಿ ಕಚೇರಿ, ಬ್ಯಾಂಕ್ ಗೆ ರಜೆ ಇತ್ತು. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ತುರ್ತು ಸೇವೆಗಳಿಗೆ ಬೆರಳೆಣಿಕೆಯಷ್ಟು  ಜನ ತಿರುಗಾಡುತ್ತಿದ್ದು  ಪೊಲೀಸರಿಗೆ ಸೂಕ್ತ ಸಮಜಾಯಿಸಿ ನೀಡಬೇಕಾಗಿತ್ತು . ಹಣ್ಣು ತರಕಾರಿ ಇನ್ನಿತರ ಕೆಲ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿದ್ದರೂ ಖರೀದಿಸುವವರ ಸಂಖ್ಯೆ ವಿರಳವಾಗಿತ್ತು .

ಇತ್ತೀಚಿನ ಸುದ್ದಿ

ಜಾಹೀರಾತು