9:46 AM Sunday17 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಬಲ್ಮಠ ಸರಕಾರಿ ಬಾಲಕಿಯರ ಪಿಯು ಹಾಗೂ ಪದವಿ ಕಾಲೇಜಿನಲ್ಲಿ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

26/03/2025, 11:39

ಮಂಗಳೂರು(reporterkarnataka.com): ಇನ್ಫೋಸಿಸ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ಪ್ರೇರಣಾ ಟ್ರಸ್ಟ್ ಸಹಕಾರದೊಂದಿಗೆ ಬಲ್ಮಠದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಕಂಪ್ಯೂಟರ್ ಲ್ಯಾಬನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟನೆಗೊಳಿಸಿದರು.
ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯಾಸಂಗಕ್ಕೆ ಅನುಕೂಲವಾಗಲು ಕಂಪ್ಯೂಟರ್ ಲ್ಯಾಬ್ ಗಳ ಅಗತ್ಯವಿರುವ ಬಗ್ಗೆ ಈ ಹಿಂದೆಯೇ ಪ್ರಾಂಶುಪಾಲರುಗಳು ಶಾಸಕ ವೇದವ್ಯಾಸ ಕಾಮತ್ ಅವರಲ್ಲಿ ಮನವಿ ಸಲ್ಲಿಸಿದ್ದರು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಶಾಸಕರು ಈ ಬಗ್ಗೆ ವಿಶೇಷ ಗಮನಹರಿಸಿ ಆದ್ಯತೆಯ ಮೇರೆಗೆ ಅನುಕೂಲ ಮಾಡಿಕೊಡುವಂತೆ ಇನ್ಫೋಸಿಸ್ ಸಂಸ್ಥೆಯನ್ನು ಕೋರಿದ್ದರು. ಅದರಂತೆ ಇದೀಗ ಪದವಿ ಪೂರ್ವ ಕಾಲೇಜಿಗೆ 25 ಕಂಪ್ಯೂಟರ್ ಗಳು, ಪದವಿ ಕಾಲೇಜಿಗೆ 30 ಕಂಪ್ಯೂಟರ್ ಗಳ ಸಹಿತ ಸುಸಜ್ಜಿತ ಲ್ಯಾಬ್ ನಿರ್ಮಾಣಗೊಂಡಿದ್ದು ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ.


ಈ ಸಂದರ್ಭದಲ್ಲಿ ಪ್ರೇರಣಾ ಟ್ರಸ್ಟ್ ನ ರವಿರಾಜ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ವನಿತಾ ದೇವಾಡಿಗ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಬಾಳ ಹಾಗೂ ಸಂದೀಪ್, ವಾಸು, ಆಶಿಶ್, ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು