5:25 PM Thursday14 - August 2025
ಬ್ರೇಕಿಂಗ್ ನ್ಯೂಸ್
ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast…

ಇತ್ತೀಚಿನ ಸುದ್ದಿ

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ

09/11/2024, 16:08

ಮಂಗಳೂರು(reporter Karnataka.com): ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ತಜ್ಞ ವೈದ್ಯ ಡಾ ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. ಡಾ ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪು ಗಟ್ಟಿದ ರೋಗಿಗೆ ತುರ್ತು ಶಸ್ತ್ರ ಚಿಕಿತ್ಸೆ ಮಾಡಿದರು. ಡಾ ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆ ಆಗದ ಹಾಗೆ ನೆರವೇರಿಸಿದರು.
ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನಸಿರ್ಂಗ್ ಅಧಿಕಾರಿಗಳಾದ ಶೈಲಾ, ಜೇಸಿಂತ, ಅಶ್ವಿನಿ, ರೇಷ್ಮಾ, ಅಲ್ವನ ಮೆನೇಜ್ಸ್ ಇದ್ದರು. ಓಟಿ ಟೆಕ್ನಿಷಿಯನ್‍ಗಳಾದ ಧನುಷ್, ಶ್ರದ್ದಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು.
ಡಿಸೆಂಬರ್ 1ರಿಂದ ಶಸ್ತ್ರ ಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರ ಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‍ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು