6:38 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ

09/11/2024, 16:08

ಮಂಗಳೂರು(reporter Karnataka.com): ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ತಜ್ಞ ವೈದ್ಯ ಡಾ ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. ಡಾ ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪು ಗಟ್ಟಿದ ರೋಗಿಗೆ ತುರ್ತು ಶಸ್ತ್ರ ಚಿಕಿತ್ಸೆ ಮಾಡಿದರು. ಡಾ ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆ ಆಗದ ಹಾಗೆ ನೆರವೇರಿಸಿದರು.
ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನಸಿರ್ಂಗ್ ಅಧಿಕಾರಿಗಳಾದ ಶೈಲಾ, ಜೇಸಿಂತ, ಅಶ್ವಿನಿ, ರೇಷ್ಮಾ, ಅಲ್ವನ ಮೆನೇಜ್ಸ್ ಇದ್ದರು. ಓಟಿ ಟೆಕ್ನಿಷಿಯನ್‍ಗಳಾದ ಧನುಷ್, ಶ್ರದ್ದಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು.
ಡಿಸೆಂಬರ್ 1ರಿಂದ ಶಸ್ತ್ರ ಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರ ಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‍ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು