10:34 AM Tuesday9 - December 2025
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ

ಇತ್ತೀಚಿನ ಸುದ್ದಿ

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ

09/11/2024, 16:08

ಮಂಗಳೂರು(reporter Karnataka.com): ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ತಜ್ಞ ವೈದ್ಯ ಡಾ ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. ಡಾ ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪು ಗಟ್ಟಿದ ರೋಗಿಗೆ ತುರ್ತು ಶಸ್ತ್ರ ಚಿಕಿತ್ಸೆ ಮಾಡಿದರು. ಡಾ ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆ ಆಗದ ಹಾಗೆ ನೆರವೇರಿಸಿದರು.
ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನಸಿರ್ಂಗ್ ಅಧಿಕಾರಿಗಳಾದ ಶೈಲಾ, ಜೇಸಿಂತ, ಅಶ್ವಿನಿ, ರೇಷ್ಮಾ, ಅಲ್ವನ ಮೆನೇಜ್ಸ್ ಇದ್ದರು. ಓಟಿ ಟೆಕ್ನಿಷಿಯನ್‍ಗಳಾದ ಧನುಷ್, ಶ್ರದ್ದಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು.
ಡಿಸೆಂಬರ್ 1ರಿಂದ ಶಸ್ತ್ರ ಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರ ಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‍ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು