ಇತ್ತೀಚಿನ ಸುದ್ದಿ
ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ
15/06/2024, 15:33
ಮಂಗಳೂರು(reporterkarnataka.com): ಮೀನುಗಾರಿಕೆ ಇಲಾಖೆ ಮಂಗಳೂರು ಹಾಗೂ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಜಂಟಿ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮೀನುಗಾರಿಕೆ ಇಲಾಖೆಯ ಅಪರ ನಿರ್ದೇಶಕ ಹರೀಶ್ ಕುಮಾರ್ ನೆರವೇರಿಸಿದರು. ಮಂಗಳೂರು
ರಕ್ತ ನಿಧಿ ಕೇಂದ್ರ ವೈದ್ಯಾಧಿಕಾರಿ ಡಾ. ಶರತ್ ಕುಮಾರ್ ಮೀನುಗಾರಿಕೆ ಜಂಟಿ ನಿರ್ದೇಶಕ ಸಿದ್ದಯ್ಯ, ಮೀನುಗಾರಿಕೆ ಉಪನಿರ್ದೇಶಕರಾದ ರೇವತಿ ಜೆ., ದಿವ್ಯಾ ಬಿ. ಎಲ್., ಮೀನುಗಾರಿಕೆ ಉಪ ನಿರ್ದೇಶಕರು (ಪ್ರ) ದಿಲೀಪ್ ಕುಮಾರ್, ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಶ್ರೀದೇವಿ ಪ್ರಭು, ಕವಿತಾ, ದಿವಾಕರ ಖಾರ್ವಿ ಹಾಗೂ ಮೀನುಗಾರಿಕೆ ಇಲಾಖೆಯ ಸಿಬ್ಬಂದಿಗಳು, ರಕ್ತದಾನಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕ
ದಿವಾಕರ ಖಾರ್ವಿ ಅವರು 80ನೆಯ ಬಾರಿ ಹಾಗೂ ವಾಹನ ಚಾಲಕರಾದ ಯೋಗೇಶ್ ದೇವಾಡಿಗ 52ನೇ ಬಾರಿ ರಕ್ತದಾನ ಮಾಡಿದರು. ಒಟ್ಟು 52 ದಾನಿಗಳು ರಕ್ತದಾನವನ್ನು ಮಾಡಿದರು.