9:51 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ: ಆನ್ಲೈನ್ ಟ್ರೇಡಿಂಗ್ ಜಾಲಕ್ಕೆ ಸಿಲುಕಿರುವ ಶಂಕೆ

02/09/2024, 20:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ತೀರ್ಥಹಳ್ಳಿಯ
ಯುವಕ ಶವ ಸೋಮವಾರ ತುಂಗಾ ನದಿಯಲ್ಲಿ ಪತ್ತೆಯಾಗಿದೆ.
ಇಂದಾವರ ಗ್ರಾಮದ ಜಯದೀಪ್ ( 24 ) ಮೃತಪಟ್ಟ ಯುವಕ.
ತೀರ್ಥಹಳ್ಳಿ ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ‌್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನ ನಿನ್ನೆ ವ್ಯಕ್ತವಾಗಿತ್ತು. ಇಂದು ಸೋಮವಾರ ಆತನ ಮೃತದೇಹ ಪತ್ತೆಯಾಗಿದೆ.

ಜಯದೀಪ್ ತುಂಗಾ ನದಿಗೆ ಹಾರಿ ತನ್ನ ಜೀವವನ್ನು ಕಳೆದುಕೊಂಡಿದ್ದಾನೆ. ಶನಿವಾರ ಬೆಳಗ್ಗೆ ವಾಟ್ಸಪ್ ಸ್ಟೇಟಸ್ ಹಾಕಿ ತುಂಗಾ ನದಿಯ ಸಮೀಪ ಬೈಕ್ ನಿಲ್ಲಿಸಿ ಆತ ಕಣ್ಮರೆಯಾಗಿದ್ದ. ನಂತರ ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನದಿಂದ ಪೋಲೀಸ್, ಅಗ್ನಿಶಾಮಾಕದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಆದರೆ ಸ್ವಲ್ಪ ದೂರದಲ್ಲಿರುವ ತುಂಗಾ ನದಿ ಸ್ಮಶಾನಕಟ್ಟೆ ಸಮೀಪ ಆತನ ಶವ ಸಿಕ್ಕಿದೆ.
ಹುಡುಗಿ ಸಿಕ್ಕಿಲ್ಲ ಎಂಬುದರ ಜೊತೆಗೆ ಆತ ಆನ್ಲೈನ್ ಟ್ರೇಡಿಂಗ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದ ಎಂಬುದಾಗಿ ಮಾತು ಕೇಳಿ ಬಂದಿತ್ತು. ಒಟ್ಟಿನಲ್ಲಿ ಬದುಕಿ ಬಾಳ ಬೇಕಿದ್ದ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು