6:40 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ: ಆನ್ಲೈನ್ ಟ್ರೇಡಿಂಗ್ ಜಾಲಕ್ಕೆ ಸಿಲುಕಿರುವ ಶಂಕೆ

02/09/2024, 20:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ತೀರ್ಥಹಳ್ಳಿಯ
ಯುವಕ ಶವ ಸೋಮವಾರ ತುಂಗಾ ನದಿಯಲ್ಲಿ ಪತ್ತೆಯಾಗಿದೆ.
ಇಂದಾವರ ಗ್ರಾಮದ ಜಯದೀಪ್ ( 24 ) ಮೃತಪಟ್ಟ ಯುವಕ.
ತೀರ್ಥಹಳ್ಳಿ ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ‌್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನ ನಿನ್ನೆ ವ್ಯಕ್ತವಾಗಿತ್ತು. ಇಂದು ಸೋಮವಾರ ಆತನ ಮೃತದೇಹ ಪತ್ತೆಯಾಗಿದೆ.

ಜಯದೀಪ್ ತುಂಗಾ ನದಿಗೆ ಹಾರಿ ತನ್ನ ಜೀವವನ್ನು ಕಳೆದುಕೊಂಡಿದ್ದಾನೆ. ಶನಿವಾರ ಬೆಳಗ್ಗೆ ವಾಟ್ಸಪ್ ಸ್ಟೇಟಸ್ ಹಾಕಿ ತುಂಗಾ ನದಿಯ ಸಮೀಪ ಬೈಕ್ ನಿಲ್ಲಿಸಿ ಆತ ಕಣ್ಮರೆಯಾಗಿದ್ದ. ನಂತರ ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನದಿಂದ ಪೋಲೀಸ್, ಅಗ್ನಿಶಾಮಾಕದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಆದರೆ ಸ್ವಲ್ಪ ದೂರದಲ್ಲಿರುವ ತುಂಗಾ ನದಿ ಸ್ಮಶಾನಕಟ್ಟೆ ಸಮೀಪ ಆತನ ಶವ ಸಿಕ್ಕಿದೆ.
ಹುಡುಗಿ ಸಿಕ್ಕಿಲ್ಲ ಎಂಬುದರ ಜೊತೆಗೆ ಆತ ಆನ್ಲೈನ್ ಟ್ರೇಡಿಂಗ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದ ಎಂಬುದಾಗಿ ಮಾತು ಕೇಳಿ ಬಂದಿತ್ತು. ಒಟ್ಟಿನಲ್ಲಿ ಬದುಕಿ ಬಾಳ ಬೇಕಿದ್ದ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು