10:03 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಅರಸ್ ದೀರ್ಘಕಾಲ ಸಿಎಂ ಆಗಿದ್ದಾಗ ಅವರ ಜೊತೆ ನನ್ನ ತಂದೆ ಇದ್ದರು, ಈಗ ಸಿದ್ದರಾಮಯ್ಯ ಜತೆ ನಾನಿದ್ದೇನೆ: ಸ್ಪೀಕರ್ ಖಾದರ್ ಸಂತಸ

06/01/2026, 20:53

ಬೆಂಗಳೂರು(reporterkarnataka.com): ದೇವರಾಜ್ ಅರಸ್ ದೀರ್ಘಕಾಲ ಮುಖ್ಯಮಂತ್ರಿಯಾಗಿದ್ದಾಗ ಅವರ ಜೊತೆ ನನ್ನ ತಂದೆ ಯು.ಟಿ.ಫರೀದ್ ಶಾಸಕರಾಗಿ ಜೊತೆಗಿದ್ದರು. ಈಗ ಸಿದ್ದರಾಮಯ್ಯರವರು ದೀರ್ಘಕಾಲ ಮುಖ್ಯ ಮಂತ್ರಿಯಾಗಿರುವಾಗ ಅವರ ಜೊತೆ ನಾನು ಉನ್ನತ ಹುದ್ದೆಯಲ್ಲಿರುವುದು ಸಂತೋಷದ ವಿಚಾರ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ರಾಜ್ಯದ ದೀರ್ಘಾವದಿ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಿಸುತ್ತಿರುವ ಸಿದ್ದರಾಮಯ್ಯನವರಿಗೆ ತುಂಬು ಹೃದಯದ ಶುಭಾಶಯಗಳು!
ರಾಜ್ಯದ ರಾಜಕೀಯದಲ್ಲಿ ಕಾಲಘಟ್ಟವನ್ನ ಸ್ಥಾಪಿಸಿದವರು ನೀವು. ಸಿದ್ದರಾಮಯ್ಯನವರ ಕಾಲ ಎಂದು ಜನ ಗರ್ವದಿಂದ ಹೇಳಿಕೊಳ್ಳುವ ಅವಧಿ ಕೊಟ್ಟಿದ್ದೀರಿ.ನಿಮ್ಮ ಅವಧಿಯಲ್ಲಿ ನಾವು ಜೊತೆಗಿದ್ದೆವು ಎಂಬುದು ನಮಗೂ ಹೆಮ್ಮಯ ವಿಷಯ. ಈ ಹಿಂದೆ ದೇವರಾಜ್ ಅರಸು ಅವರು ದಾಖಲೆ ಮಾಡಿದ್ದ ಸಂದರ್ಭದಲ್ಲಿ ನಮ್ಮ ತಂದೆ ಫರೀದ್ ಅವರ ಜೊತೆ ಶಾಸಕರಾಗಿ ಕೆಲಸ ಮಾಡಿದ್ದರು.ಈಗ ನಿಮ್ಮ ಜೊತೆ ನಾನು ಸಹ ಉನ್ನತ ಜವಾಬ್ದಾರಿ ನಿರ್ವಹಿಸುತ್ತಿರುವುದು ಖುಷಿಯ ವಿಚಾರ.ಒಡೆಯುವ ಈ ಜಗತ್ತಿನಲ್ಲಿ ನೀವು ಒಂದಾಗಿಸುವವರಿಗೆ ನಾಯಕತ್ಬ ನೀಡಿದ್ದಿರಿ. ನೀವು ಹಿಡಿದಿರುವ ಸಮಾನತೆಯ ಹಣತೆಗೆ ನಾವು ಕೈಜೋಡಿಸುತ್ತೇವೆ.ಶೋಷಿತ ಪೀಡಿತ ಹಾಗೂ ದಮನಿತರ ಪರ ನಿಮ್ಮ ದನಿಗೆ ನಾವು ದನಿಗೂಡಿಸುತ್ತೇವೆ. ಈ ಸುಸಂದರ್ಭದಲ್ಲಿ ಸಮಾಜದ ಪಣ ಇನ್ನಷ್ಟು ಗಟ್ಟಿಗೊಳಸೋಣ…!
ಮಗದೊಮ್ಮೆ ಶುಭಾಶಯಗಳು ಮುಖ್ಯಮಂತ್ರಿಗಳೇ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು