1:42 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಹಣ ನೀಡುವ ಕಾಮಧೇನು: ಐಶ್ವರ್ಯ ಅನಂತಕುಮಾರ್ ಕಿಡಿ

20/03/2026, 23:03

ಬೆಂಗಳೂರು(reporterkarnataka.com): ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು ‘ಕ್ಯಾಶ್ ಕೌ’ ಅಥವಾ ‘ಹಣವನ್ನು ಕೊಡುವ ಕಾಮಧೇನು’ ಮಾಡಿಕೊಂಡಿದೆ. ಇದೀಗ ಪಂಚ ರಾಜ್ಯಗಳ ಚುನಾವಣೆಗೆ ರಾಜ್ಯದ ಹಣವನ್ನು ಬಳಕೆ ಮಾಡಲಾಗುತ್ತಿದೆ ಎಂದು ದಿವಂಗತ ಬಿಜೆಪಿ ನಾಯಕ ಅನಂತ ಕುಮಾರ್ ಅವರ ಪುತ್ರಿ ಐಶ್ವರ್ಯಾ ಅನಂತ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐಶ್ವರ್ಯ ಅನಂತ್ ಕುಮಾರ್ ಅವರು ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ತನ್ನ ರಾಜಕೀಯ ಹಿತಾಸಕ್ತಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ‘ಮತ್ತೆ ಅದೇ ಕಥೆ ಶುರುವಾಗಿದೆ.
ಮುಂಬರುವ ಅಸ್ಸಾಂ ಚುನಾವಣೆಯ ರಾಜಕೀಯ ಪ್ರಚಾರಗಳಿಗೆ ಹಣ ಒದಗಿಸಲು ಕಾಂಗ್ರೆಸ್ ಹೈಕಮಾಂಡ್ ಮತ್ತೊಮ್ಮೆ ಕರ್ನಾಟಕವನ್ನು ‘ನಗದು ಹಸು’ ಆಗಿ ಬಳಸಿಕೊಳ್ಳಲು ತಂತ್ರ ಹೂಡುತ್ತಿದೆ’ ಎಂದು ನೇರವಾಗಿ ಆರೋಪಿಸಿದ್ದಾರೆ.
ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪುತ್ರಿ ಐಶ್ವರ್ಯ ಅನಂತ್ ಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಹಣಕಾಸಿನ ಆರೋಪ ಮಾಡುವ ಮೂಲಕ ರಾಜಕೀಯ ಸಂಚಲನ ಸೃಷ್ಟಿಸಿದ್ದಾರೆ. ನಮ್ಮ ರಾಜ್ಯ ಸಾಲದ ಸುಳಿಗೆ ಸಿಲುಕಿದ್ದರೂ, ಡಿ.ಕೆ. ಶಿವಕುಮಾರ್ ಅವರೇ ಕಾಂಗ್ರೆಸ್ ಹೈಕಮಾಂಡ್‌ಗೆ ನೀವೇಕೆ ಹಣ ನೀಡುವ ಪಾತ್ರವನ್ನು ನಿರ್ವಹಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ‘ಡಿ.ಕೆ. ಶಿವಕುಮಾರ್ ಸರ್, ಕರ್ನಾಟಕಕ್ಕೆ ನಿಮ್ಮ ನಿಷ್ಠೆ ಎಲ್ಲಕ್ಕಿಂತ ಮಿಗಿಲು ಎಂದು ನೀವು ಪದೇ ಪದೇ ಹೇಳುತ್ತಿರುತ್ತೀರಿ. ಹಾಗಿರುವಾಗ, ರಾಜ್ಯವು ಭಾರಿ ಸಾಲದ ಸುಳಿಯಲ್ಲಿ ಸಿಲುಕಿರುವಾಗ ಕಾಂಗ್ರೆಸ್ ಹೈಕಮಾಂಡ್‌ಗಾಗಿ ನೀವು ಈ ಪಾತ್ರವನ್ನು (ಹಣ ಒದಗಿಸುವ ಪಾತ್ರ) ಏಕೆ ನಿರ್ವಹಿಸುತ್ತಿದ್ದೀರಿ?’ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ತಮ್ಮ ಟ್ವೀಟ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿರುವ ಐಶ್ವರ್ಯ, ಅವರ ನಿಷ್ಠೆಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು